ರೈತರ ಮನೆ ಬಾಗಿಲಿಗೆ ಸಾಲ ಸೌಲಭ್ಯ: ಶಾಸಕ ಶರತ್ ಬಚ್ಚೇಗೌಡ

KannadaprabhaNewsNetwork |  
Published : Aug 10, 2024, 01:37 AM IST
ಫೋಟೋ: 9 ಹೆಚ್‌ಎಸ್‌ಕೆ 3ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ 11 ಲಕ್ಷರೂ.ವೆಚ್ಚದಲ್ಲಿ ನೆಲವಾಗಿಲು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಪಡಿತರ ವಿತರಣಾ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರು. | Kannada Prabha

ಸಾರಾಂಶ

ರೈತರ ಹಿತ ಕಾಯುವುದೇ ಸಹಕಾರ ಬ್ಯಾಂಕ್‌ಗಳ ಮುಖ್ಯ ಉದ್ದೇಶ. ಅದಕ್ಕಾಗಿ ರೈತರ ಮನೆಯ ಬಾಗಿಲಿಗೇ ಸಾಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯ ರೈತ ಸೇವಾ ಸಹಕಾರ ಸಂಘದ ಪಡಿತರ ವಿತರಣಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

-ಹಿಂಡಿಗನಾಳದಲ್ಲಿ ಪಡಿತರ ವಿತರಣಾ ಕೇಂದ್ರದ ಕಟ್ಟಡ ಉದ್ಘಾಟನೆಕನ್ನಡಪ್ರಭ ವಾರ್ತೆ ಹೊಸಕೋಟೆ

ರೈತರ ಹಿತ ಕಾಯುವುದೇ ಸಹಕಾರ ಬ್ಯಾಂಕ್‌ಗಳ ಮುಖ್ಯ ಉದ್ದೇಶ. ಅದಕ್ಕಾಗಿ ರೈತರ ಮನೆಯ ಬಾಗಿಲಿಗೇ ಸಾಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಂದಗುಡಿ ಹೋಬಳಿಯ ಹಿಂಡಿಗನಾಳದಲ್ಲಿ 11 ಲಕ್ಷ ರು. ವೆಚ್ಚದಲ್ಲಿ ನೆಲವಾಗಿಲು ರೇಷ್ಮೆ ಬೆಳೆಗಾರರ ಹಾಗೂ ರೈತ ಸೇವಾ ಸಹಕಾರ ಸಂಘದ ಪಡಿತರ ವಿತರಣಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸಹಕಾರ ಬ್ಯಾಂಕ್‌ಗಳು ದೇಶದ ವ್ಯವಸ್ಥೆಯ ಉತ್ತಮ ಅಡಿಪಾಯ. ನಬಾರ್ಡ್ ಸಹಕಾರ ಸಂಘಗಳ ಸದೃಢ ಬೆಳವಣಿಗೆಗೆ ಆರ್ಥಿಕ ನೆರವು ನೀಡುತ್ತಿದೆ. ಈ ನಿಟ್ಟಿನಲ್ಲಿ ಸಹಕಾರ ಸಂಘಗಳು ರೈತರ ಮನೆ ಬಾಗಿಲಿಗೆ ಸಾಲ ಸೌಲಭ್ಯ ನೀಡುತ್ತಿವೆ ಎಂದು ಹೇಳಿದರು.

ಬೆಳೆ ಸಾಲ, ಜಾನುವಾರು, ಚಿನ್ನಾಭರಣ, ಮನೆ ಕಟ್ಟಲು, ಸ್ತ್ರೀಶಕ್ತಿ ಸಂಘಗಳಿಗೆ, ನೇರ ಸಾಲ, ಕಡಿಮೆ ಬಡ್ಡಿ ಹಾಗೂ ಶೂನ್ಯ ಬಡ್ಡಿ ಸಾಲ ಸೌಲಭ್ಯ ಒದಗಿಸುತ್ತಿದೆ. ರೈತರು ಸದ್ಬಳಸಿಕೊಂಡು ಅರ್ಥಿಕ ಬಲಿಷ್ಠರಾಗಬೇಕು. ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕ್‌ಗಳ ಬೆಳವಣಿಗೆಗೂ ಸಹಕರಿಸಬೇಕು ಎಂದು ತಿಳಿಸಿದರು.

ರಾಜ್ಯಒಕ್ಕಲಿಗರ ಸಂಘದ ನಿರ್ದೇಶಕ ರಾಜಶೇಖರಗೌಡ, ಜಿಪಂ ಮಾಜಿ ಅಧ್ಯಕ್ಷೆ ಸವಿತಾ, ತಾಪಂ ಮಾಜಿ ಅಧ್ಯಕ್ಷ ಕೆಂಚೇಗೌಡ, ಮಾಜಿ ಸದಸ್ಯ ಬೀರಪ್ಪ, ರಾಮಚಂದ್ರೇಗೌಡ, ಎಸ್‌ಎಫ್‌ಸಿಎಸ್ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಎನ್.ಮಂಜುನಾಥ್, ಸಿಇಒ ಎಚ್.ಎಂ.ಗುರುದೇವ್, ನಿರ್ದೇಶಕರಾದ ಎಚ್.ಕೆ.ನಾರಾಯಣಗೌಡ, ಎನ್.ಡಿ.ರಮೇಶ್, ಎನ್.ಶ್ರೀನಿವಾಸ್, ಎಸ್.ಕೆ.ರಾಜೇಶ್, ಎಸ್.ಮಂಜುನಾಥ್, ಜಯಮ್ಮ, ಲಕ್ಷ್ಮೀದೇವಿ, ರವಿಶಂಕರ್, ಟಿ.ಮುನಿರಾಜು, ಎ.ಆರ್.ಕೃಷ್ಣಪ್ಪ, ವಿ.ಎಂ.ಮುನಿನಾರಾಯಣಪ್ಪ, ವಜೀರ್‌ಖಾನ್, ಉದ್ಯಮಿ ಎಂ.ಮಂದೀಪ್‌ಗೌಡ, ಗ್ರಾಪಂ ಅಧ್ಯಕ್ಷೆ ಚಾಂದ್ ಸುಲ್ತಾನಾ, ಮಾಜಿ ಅಧ್ಯಕ್ಷ ಎಚ್.ಎಂ.ಮೂರ್ತಿ, ಸದಸ್ಯರಾದ ಮಧು, ಕರಗೇಗೌಡ, ಸರೋಜಮ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ