ಗೃಹಲಕ್ಷ್ಮಿಯರಿಗೆ ಸಾಲ ಸೌಲಭ್ಯ: ಡಿ.ಡಿ. ಮೋರನಾಳ

KannadaprabhaNewsNetwork |  
Published : Dec 31, 2025, 02:30 AM IST
30ಎಂಡಿಜಿ1, ಮುಂಡರಗಿ ತಾಪಂ ಸಮಥ್ಯಸೌಧದಲ್ಲಿ ಮಂಗಳವಾರ ತಾಲೂಕಾ ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಡಿ.ಡಿ.ಮೋರನಾಳ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು. | Kannada Prabha

ಸಾರಾಂಶ

ಗೃಹಲಕ್ಷ್ಮಿ ವಿವಿಧೋದ್ದೇಶಗಳ ಸಹಕಾರ ಸಂಘದಿಂದ ಮಹಿಳೆಯರನ್ನು ಮತ್ತಷ್ಟು ಸ್ವಾವಲಂಬನೆ ಮಾಡುವ ಯೋಜನೆ ಇದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಸಾಮಾಜಿಕ, ಆರ್ಥಿಕ ಬದಲಾವಣೆ ಕಾಣಬಹುದು.

ಮುಂಡರಗಿ: ಗೃಹಲಕ್ಷ್ಮಿ ವಿವಿಧೋದ್ದೇಶಗಳ ಸಹಕಾರ ಸಂಘ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರಚನೆಯಾಗಲಿದ್ದು, ಅರ್ಹ ಫಲಾನುಭವಿಗಳಿಗೆ ಸಂಘದ ಮೂಲಕ ₹80 ಸಾವಿರದಿಂದ ₹3 ಲಕ್ಷದವರೆಗೆ ಸಾಲ ಸೌಲಭ್ಯ ಇರುತ್ತದೆ ಎಂದು ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಡಿ.ಡಿ. ಮೋರನಾಳ ತಿಳಿಸಿದರು.ಮಂಗಳವಾರ ಪಟ್ಟಣದ ತಾಪಂ ಸಾಮರ್ಥ್ಯಸೌಧದಲ್ಲಿ ಜರುಗಿದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗೃಹಲಕ್ಷ್ಮಿ ವಿವಿಧೋದ್ದೇಶಗಳ ಸಹಕಾರ ಸಂಘದಿಂದ ಮಹಿಳೆಯರನ್ನು ಮತ್ತಷ್ಟು ಸ್ವಾವಲಂಬನೆ ಮಾಡುವ ಯೋಜನೆ ಇದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಸಾಮಾಜಿಕ, ಆರ್ಥಿಕ ಬದಲಾವಣೆ ಕಾಣಬಹುದು. ಪಂಚಯೋಜನೆಗಳಲ್ಲಿ ಏನಾದರೂ ತೊಂದರೆಯಾದರೆ ತಮ್ಮನ್ನು ಇಲ್ಲವೆ ಉಚಿತ 181 ಸಹಾಯವಾಣಿ ಸೌಲಭ್ಯ ಇದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಶಕ್ತಿ ಯೋಜನೆ ಕುರಿತು ಚರ್ಚಿಸುವ ಸಂದರ್ಭದಲ್ಲಿ ಹೂವಿನಹಡಗಲಿ ಘಟಕದ ಬಸ್ಸುಗಳು ಗದುಗಿಗೆ ತೆರಳುತ್ತಿದ್ದು, ಅವು ಕೇವಲ ಹೊಸ ಬಸ್ ನಿಲ್ದಾಣಕ್ಕೆ ಮಾತ್ರ ತೆರಳುತ್ತಿದ್ದು, ಪ್ರಯಾಣಿಕರು ಅಲ್ಲಿಂದ ಮತ್ತೆ ಹಣ ಕೊಟ್ಟು ಬೇರೆ ಬಸ್ಸಿಗೆ ತೆರಳಬೇಕಾಗಿದೆ. ಆದ್ದರಿಂದ ಅವುಗಳು ಹಳೆ ಬಸ್ ನಿಲ್ದಾಣದವರೆಗೂ ತೆರಳಬೇಕು. ಬಸ್ಸುಗಳಲ್ಲಿ ಸ್ವಚ್ಛತೆಯ ಕೊರತೆ ಎದ್ದು ಕಾಣುತ್ತಿದೆ. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶೌಚಾಲಯದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದ್ದು, ಕಡಿಮೆ ಮಾಡಿ ಅನುಕೂಲ ಮಾಡಿಕೊಡುವಂತೆ ಸಭೆಯಲ್ಲಿ ಸದಸ್ಯರು ಪ್ರಸ್ತಾಪಿಸಿದರು.

ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕ ಶೇಖರ ನಾಯಕ ಮಾತನಾಡಿ, ಬಸ್ ನಿಲ್ದಾಣ ಹಳೆಯದಾಗಿದ್ದು, ನೂತನವಾಗಿ ನಿರ್ಮಿಸಲು ಮೇಲಧಿಕಾರಿಗೆ ಪ್ರಸ್ತಾವನೆ ಕಳಿಸಲಾಗಿದೆ. ಎಲ್ಲಿ ಅವಶ್ಯಕತೆ ಇದೆಯೊ ಅಲ್ಲಿ ಬಸ್ಸಿನ ಸೌಲಭ್ಯ ದೊರಕಿಸಲು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಿಳಿಸಲಾಗುವುದು. ಇನ್ನು ಹಡಗಲಿಯಿಂದ ಮುಂಡರಗಿ ಮಾರ್ಗವಾಗಿ ಗದಗ ಹೊರಡುವ ತಡೆರಹಿತ ಬಸ್ಸುಗಳು ಗದಗ ಹಳೆ ಬಸ್ ನಿಲ್ದಾಣಕ್ಕೆ ಹೋಗುವಂತೆ ಸಂಬಂಧಟ್ಟ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದರು.

ಹೆಸ್ಕಾಂ ಎಇ ಬಸವರಾಜ, ಸಿಡಿಪಿಒ ಮಹಾದೇವಪ್ಪ ಇಸರನಾಳ ಮಾತನಾಡಿದರು. ಸದಸ್ಯರಾದ ರಾಮಣ್ಣ ಮೇಗಲಮನಿ, ನಾಗರಾಜ ಸಜ್ಜನರ, ಗಣೇಶ ರಾಠೋಡ, ಕಾಶಪ್ಪ ಹೊನ್ನೂರ, ವಿಶ್ವನಾಥ ಪಾಟೀಲ, ಜೈಲಾನಸಾಬ ವಡ್ಡಟ್ಟಿ, ಸುರೇಶ ಮಾಳಗಿಮನಿ, ಶರಣಪ್ಪ ಮಲ್ಲಾಪೂರ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ
ಶೆಡ್‌ ತೆರವಿನ ಪ್ರಕರಣದಲ್ಲಿ ಪಾಕ್‌ ಹಸ್ತಕ್ಷೇಪಕ್ಕೆ ಕೈ ಕಿಡಿ