ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಉತ್ಸವದ ಅಂಗವಾಗಿ ನಿರ್ಮಿಸಲಾಗಿರುವ ಹಾಸ್ಯನಟ ಶ್ರೀ ನರಸಿಂಹರಾಜು ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಲಾವಿದರನ್ನು ಅಭಿನಂದಿಸಿ ಅವರು ಮಾತನಾಡಿದರು.
ನಾವು ಕಿರಿ ವಯಸ್ಸಿನಲ್ಲಿದ್ದಾಗ ಹಾಸ್ಯ ನಟರಾದ ನರಸಿಂಹರಾಜು ಅವರು ತೆರೆ ಮೇಲೆ ಬಂದರೆ ಮನರಂಜನೆಯ ಹೊಳೆಯೇ ಹರಿಯುತ್ತಿತ್ತು. ಅಂದು ನಾವು ಟೂರಿಂಗ್ ಟಾಕೀಸ್ಗಳಲ್ಲಿ ಸಿನಿಮಾ ನೋಡಲು ಹೋಗುತ್ತಿದ್ದೆವು. ನರಸಿಂಹರಾಜುರವರಂತಹ ಮೇರು ಕಲಾವಿದರು ನಮ್ಮ ಜಿಲ್ಲೆಯವರು ಎನ್ನುವುದು ಹೆಮ್ಮೆಯ ಸಂಗತಿ ಎಂದರು ಹೇಳಿದರು.ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಲ್ಲೂ ಮನರಂಜನೆ ಮಾಯವಾಗುತ್ತಿದೆ. ದಸರಾ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನರಂಜನೆ ನೀಡುವ ಕಾರ್ಯ ನಡೆಯುತ್ತಿರುವುದು ಉತ್ತಮವಾಗಿದೆ. ಹಿಂದಿನಿಂದ ಬಂದಿರುವ ಪೌರಾಣಿಕ ನಾಟಕಗಳು ಮನರಂಜನೆ ನೀಡುವಲ್ಲಿ ಯಶಸ್ವಿಯಾಗುತ್ತಲೇ ಇವೆ ಎಂದರು.
ದಸರಾ ಆಚರಣೆ ಸಂಪ್ರದಾಯವನ್ನು ಜಿಲ್ಲಾಡಳಿತ ಮುಂದುವರೆಸಿಕೊಂಡು ಹೋಗಲಿ ಎಂದು ಅವರು ಆಶಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.