ಒಕ್ಕೊರಲಿನ ನಿರ್ಧಾರದಂತೆ ಪ್ರಜಾಸೌಧ, ಡಿಪೋಗೆ ಸ್ಥಳ ನಿಗದಿ

KannadaprabhaNewsNetwork |  
Published : Jul 15, 2025, 11:45 PM IST
ಕೊಲ್ಹಾರ | Kannada Prabha

ಸಾರಾಂಶ

ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಸಂತ್ರಸ್ತರ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣ ಸೇರಿದಂತೆ ಇಡೀ ತಾಲೂಕಿನ ಅಭಿವೃದ್ಧಿಗೆ ಆದ್ಯತೆ

ಕನ್ನಡಪ್ರಭ ವಾರ್ತೆ ಕೊಲ್ಹಾರ

ಪಟ್ಟಣದಲ್ಲಿ ಪ್ರಜಾಸೌಧ ಹಾಗೂ ಬಸ್ ಡಿಪೋ ಸ್ಥಳ ಬದಲಾವಣೆ ಮಾಡುವ ವಿಷಯದಲ್ಲಿ ಸ್ಥಳೀಯರ ಒಕ್ಕೊರಲಿನ ನಿರ್ಧಾರದಂತೆ ಯೋಜನಾ ಸ್ಥಳ ನಿಗದಿ ಮಾಡುವುದಾಗಿ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ನಗರದಲ್ಲಿ ತಮ್ಮ ಗೃಹ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಕೊಲ್ಹಾರ ಪಟ್ಟಣದ ನಿಯೋಗದ ಮನವಿ ಆಲಿಸಿದ ಸಚಿವರು, ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಸಂತ್ರಸ್ತರ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣ ಸೇರಿದಂತೆ ಇಡೀ ತಾಲೂಕಿನ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಇದರ ಭಾಗವಾಗಿ ತಾಲೂಕು ಆಡಳಿತಸೌಧ ಹಾಗೂ ಬಸ್ ಡಿಪೋ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸ್ಥಳೀಯರಿಗೆ ಅನುಕೂಲ ಆಗುವ ರೀತಿಯಲ್ಲಿ ಸ್ಥಳೀಯರ ಒಕ್ಕೊರಲಿನ ನಿರ್ಧಾರದಂತೆ ಅಭಿವೃದ್ಧಿ ಯೋಜನೆ ರೂಪಿಸಲಾಗುತ್ತದೆ. ಹೀಗಾಗಿ ಅಭಿವೃದ್ಧಿ ವಿಷಯದಲ್ಲಿ ಒಡಕಿನ, ಅಪಸ್ವರದ ಮಾತುಗಳು ಬೇಡ ಎಂದು ಕಿವಿ ಮಾತು ಹೇಳಿದರು.

ಮನವಿ ಸಲ್ಲಿಸಿ ಮಾತನಾಡಿದ ನಿಯೋಗದ ಮುಖಂಡರಾದ, ಸಿ.ಎಂ.ಗಣಕುಮಾರ, ಕೊಲ್ಹಾರ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಈರಣ್ಣ ಕೋಮಾರ, ಕೊಲ್ಹಾರ ಪಟ್ಟಣದ ಶಾಲಾ ಆವರಣದಲ್ಲಿ ಪ್ರಜಾಸೌಧ ನಿರ್ಮಾಣ ಮತ್ತು ಬಸ್ ನಿಲ್ದಾಣ ಭಾಗ-1ರಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಸ್ಥಳ ನಿಗದಿ ಮಾಡಿರುವ ಮಾಹಿತಿ ಇದೆ. ಆದರೆ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣದಲ್ಲಿನ ಈ ಸ್ಥಳ ಬಳಕೆಯ ಬದಲಾಗಿ ಸದರಿ ಎರಡೂ ಯೋಜನೆಗಳಿಗೆ ಪರ್ಯಾಯ ಸ್ಥಳ ನಿಗದಿ ಮಾಡುವಂತೆ ಮನವಿ ಮಾಡಿದರು.

ಕೊಲ್ಹಾರ ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ ಮತ್ತು ಉರ್ದು ಪ್ರಾಥಮಿಕ ಶಾಲೆಯ ಆವರಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಸ್ಥಳ ನಿಗದಿ ಹಾಗೂ ದಿಗಂಬರೇಶ್ವರ ಮಠದ ಹತ್ತಿರ ಬಸ್ ನಿಲ್ದಾಣದಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ ಎಂಬ ಮಾಹಿತಿ ಇದೆ. ಈ ಎರಡೂ ಸ್ಥಳಗಳು ಪಟ್ಟಣದ ಹೃದಯ ಭಾಗದಲ್ಲಿದ್ದು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಲು ಪಟ್ಟಣದ ಮಧ್ಯೆ ಇರುವ ಶಾಲೆ ಹಾಗೂ ಈ ಭಾಗದ ಜನರಿಗೆ ಬಸ್ ನಿಲ್ದಾಣ ಅವಶ್ಯಕತೆ ಇದೆ. ಹೀಗಾಗಿ ಇವೆರಡೂ ಸ್ಥಳಗಳ ಬದಲಾಗಿ ಬೇರೆ ಸ್ಥಳ ಗುರುತಿಸುವಂತೆ ಕೋರಿದರು.

ಈ ವೇಳೆ ಪಪಂ ಅಧ್ಯಕ್ಷ ಸಿ.ಎಸ್.ಗಿಡ್ಡಪ್ಪಗೋಳ, ಸದಸ್ಯರಾದ ಶ್ರೀಶೈಲ ಮುಳವಾಡ, ವಿಜಯಮಹಾಂತೇಶ ಗಿಡ್ಡಪ್ಪಗೋಳ, ಲಕ್ಷ್ಮೀಬಾಯಿ ಹೆರಕಲ್, ಆಶೋಕ ಜಿಡ್ಡಿಬಾಗಿಲು, ಡಿ.ಕೆ.ಈಟಿ, ಮಲ್ಲು ಹೆರಕಲ್, ಪಪಂ ಮಾಜಿ ಸದಸ್ಯ ಈರಪ್ಪ ಗಡ್ಡಿಪೂಜಾರಿ, ಗ್ರಾಮದ ಪ್ರಮುಖರಾದ ರಾಮಣ್ಣ ಉಪ್ಪಲದಿನ್ನಿ, ಪುಂಡಲೀಕ ಕಂಬಾರ, ಮಲ್ಲಪ್ಪ ಕೊಠಾರಿ, ಡಾ.ರಾಚಯ್ಯ ಮಠ, ನಂದಪ್ಪ ಗಿಡ್ಡಪಗೊಳ, ಈರಣ್ಣ ಗಡ್ಡಿ, ಮಾರುತಿ ಪವಾರ, ಯಮನೋರಿ ಮಾಕಾಳಿ, ಶಿವಪುತ್ರ ಮೇಲಗಿರಿ, ರಾಜಶೇಖರಯ್ಯ ಹೀರೆಮಠ, ಕುಮಾರ ಲಮಾಣಿ, ದರೆಪ್ಪ ಬೆಳ್ಳುಬ್ಬಿ, ಸುರೇಶ ಗಿದ್ದಪ್ಪಗೋಳ, ಮಹೇಶ್ ತುಂಬರಮಟ್ಟಿ, ರಾಜು ಇವನಗಿ, ಸಿದ್ದು ಗಣಿ, ತಿಪ್ಪಣ್ಣ ಕುದರಿ, ರಮೇಶ ಹೀರೆಮಠ, ಜಿ.ಕೆ.ಪರಡಿಮಠ, ವಿಜಯಕುಮಾರ ನಿಲವಾಣಿ, ಮಾರುತಿ ಭಜಂತ್ರಿ ಸೇರಿದಂತೆ ನೂರಾರು ಪಟ್ಟಣದ ಸಾರ್ವಜನಿಕರು ಇದ್ದರು. ಸಂತೋಷ ಚೌಡಪ್ಪನವರ, ಲಕ್ಷ್ಮಣ ಸಿಂಹಾಸನ, ಕಮಲಾ ಮಾಕಾಳಿ, ಶಕುಂತಲಾ ರೇವಣಕರ, ಸಂಗೀತಾ ಪತಂಗಿ, ಸುವರ್ಣ ಸಿರಾಣಿ, ಕಸ್ತೂರಿ ಮಠಪತಿ, ಶಾಯವ್ವ ಕುಪಗಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಕೈಜೋಡಿಸಿ
ಹೊಲಗಳಲ್ಲಿ ಚರಗ ಚೆಲ್ಲಿ ಹಬ್ಬ ಆಚರಿಸಿದ ಅನ್ನದಾತರು