ರಾಮನಗರ: ಪಾದಚಾರಿಗಳ ಅನುಕೂಲಕ್ಕಾಗಿ ಸ್ಕ್ಯಾವಾಕ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಶ್ರೀ ವೀರಾಂಜನೇಯಸ್ವಾಮಿ ಟ್ರಸ್ಟ್ನ ಧೋರಣೆ ಖಂಡಿಸಿ ಗ್ರಾಮಸ್ಥರು ವೈಕುಂಠ ಏಕಾದಶಿ ದಿನವಾದ ಶುಕ್ರವಾರ ಮಂಚನಾಯಕನಹಳ್ಳಿಯಲ್ಲಿನ ಕೋತಿ ಆಂಜನೇಯಸ್ವಾಮಿ ದೇವಾಲಯಕ್ಕೆ ಬೀಗ ಜಡಿದು ಪ್ರತಿಭಟಿಸಿದರು.
ಟ್ರಸ್ಟ್ ಅಧ್ಯಕ್ಷ ತಿಮ್ಮೇಗೌಡ ಮತ್ತು ದೇವಾಲಯದ ಸಿಬ್ಬಂದಿ ಪ್ರತಿರೋಧ ತೋರಿದಾಗ ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ನಡೆಯಿತು. ತಿಮ್ಮೇಗೌಡ ಅವರನ್ನು ಮಹಿಳೆಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಇದರಿಂದ ಮುಜುಗರಕ್ಕೊಳಗಾದ ತಿಮ್ಮೇಗೌಡರು ಸ್ಥಳದಿಂದ ಹೊರಟು ಹೋದರು.
ಆನಂತರವೂ ಪ್ರತಿಭಟನೆ ಮುಂದುವರಿಸಿದ ಗ್ರಾಮಸ್ಥರು ದೇವಾಲಯದಲ್ಲಿ ಭಕ್ತರು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಪೂಜಾರಿಗಳು ಹಾಗೂ ಭಕ್ತರನ್ನು ಹೊರಕ್ಕೆ ಕಳುಹಿಸಿ ದೇವಾಲಯಕ್ಕೆ ಬೀಗ ಜಡಿದರು. ಅಲ್ಲದೆ, ಬೆಂಗಳೂರು - ಮೈಸೂರು ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ತಡೆದು ತಿಮ್ಮೇಗೌಡ, ಆಂಜನಪ್ಪ ಹಾಗೂ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಇದರಿಂದ ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಯಿತು. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ವಾಹನ ಸಂಚಾರ ಸುಗಮಗೊಳಿಸಿದರು.ಕೋತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪಾದಚಾರಿಗಳು ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪಘಾತಗಳಾಗಿ ಸಾವು ನೋವುಗಳು ಸಂಭವಿಸುತ್ತಿವೆ. ಆದ ಕಾರಣ ಮಾಜಿ ಸಂಸದ ಡಿ.ಕೆ.ಸುರೇಶ್ ದೇವಾಲಯದ ಬಳಿ ಸ್ಕೈವಾಕ್ ನಿರ್ಮಾಣಕ್ಕೆ ಮಂಜೂರಾತಿ ಕೊಡಿಸಿದರೆ, ಶಾಸಕ ಬಾಲಕೃಷ್ಣ 2024ರ ಆಗಸ್ಟ್ ನಲ್ಲಿ ಸ್ಥಳ ಗುರುತಿಸಿದ್ದರು. ಆದರೆ, ಟ್ರಸ್ಟ್ ಅಧ್ಯಕ್ಷ ತಿಮ್ಮೇಗೌಡರು ಸ್ಕೈವಾಕ್ ನಿರ್ಮಾಣಕ್ಕೆ ಅವಕಾಶ ನೀಡದೆ ತಕರಾರು ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಚಿಕ್ಕಬ್ಯಾಟಪ್ಪ, ಯೋಗಾನಂದ, ಭದ್ರಣ್ಣ, ಮೂರ್ತಿ, ವಾಜರಹಳ್ಳಿ ಮಂಜುನಾಥ್ , ಕೃಷ್ಣ, ಬೇಟೆ, ಲಕ್ಷ್ಮಮ್ಮ, ಮಂಜುಳಾ, ವೆಂಕಟಲಕ್ಷ್ಮಿ ಮತ್ತಿತರರು ಭಾಗವಹಿಸಿದ್ದರು.
ದೇಗುಲವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯರಿ
ದೇವಾಲಯದ ಬಳಿ ಸ್ಕೈವಾಕ್ ನಿರ್ಮಾಣಕ್ಕಾಗಿ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಮೇಲೆ ದೇವಾಲಯದ ಬಾಗಿಲಲ್ಲಿ 17 ಮಂದಿ ಅಪಘಾತಗಳಲ್ಲಿ ಸಾವಪ್ಪಿದ್ದಾರೆ. ಸಾರ್ವಜನಿಕರ ಉಪಯೋಗಕ್ಕಾಗಿ ಸ್ಕೈ ವಾಕ್ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಈಗ ಬೀಗ ಹಾಕಿದ್ದೇವೆ. ಮುಂದಿನ ದಿನಗಳಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಳ್ಳುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದರು.
ಬಾಕ್ಸ್ .....................
ರಾಮನಗರ: ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಕೋತಿ ಆಂಜನೇಯಸ್ವಾಮಿ ದೇವಾಲಯ ಬಳಿ ಸ್ಕೈವಾಕ್ ನಿರ್ಮಾಣಕ್ಕೆ ಅನಧಿಕೃತ ಟ್ರಸ್ಟ್ನ ಅಧ್ಯಕ್ಷ ತಿಮ್ಮೇಗೌಡರು ಅಡ್ಡಿಪಡಿಸುತ್ತಿದ್ದಾರೆ. ಇದನ್ನು ಜಿಲ್ಲಾಧಿಕಾರಿಗಳು, ತಹಸೀಲ್ದಾರ್, ಪೊಲೀಸ್ ಇಲಾಖೆ ಹಾಗೂ ಮಂಚನಾಯಕನಹಳ್ಳಿ ಗ್ರಾಪಂ ಗಂಭೀರವಾಗಿ ಪರಿಗಣಿಸಿ ಸ್ಕೈವಾಕ್ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಗ್ರಾಮದ ಮುಖಂಡ ಯೋಗಾನಂದ ಒತ್ತಾಯಿಸಿದರು.
ಟ್ರಸ್ಟ್ ಅಧ್ಯಕ್ಷ ತಿಮ್ಮೇಗೌಡರವರು ದೇವಾಲಯಕ್ಕಾಗಿ ಒಂದು ರುಪಾಯಿ ಖರ್ಚು ಮಾಡಿಲ್ಲ. ಮಂಚನಾಯಕನಹಳ್ಳಿ ಗ್ರಾಮಸ್ಥರು ದೇವಾಲಯಕ್ಕೆ ಜಾಗ ನೀಡಿದರೆ, ವಿ.ಸಂಪತ್ತು ದೇಗುಲ ನಿರ್ಮಾಣ ಮಾಡಿಸಿದರು. ಶ್ರೀ ವೀರಾಂಜನೇಯಸ್ವಾಮಿ ಟ್ರಸ್ಟ್ ಹೆಸರಿನಲ್ಲಿರುವ ಜಮೀನು ಹಳೆಯ ಪಹಣಿಯಲ್ಲಿ ವಿ.ಸಂಪತ್ ಹೆಸರಿನಲ್ಲಿಯೇ ಬರುತ್ತಿದೆ. 10 ವರ್ಷಗಳಿಂದ ಈಚೆಗೆ ಮಾರುತಿ ಮತ್ತು ಆಂಜನಪ್ಪ ಸ್ವಂತ ಹೆಸರಿನಲ್ಲಿ ದಾಖಲೆ ಮಾಡಿಸಿಕೊಂಡಿದ್ದಾರೆ. ಗ್ರಾಮಸ್ಥರು ಕೊಡುಗೆ ನೀಡಿದ ಭೂಮಿ ಬಲಾಢ್ಯರ ಪಾಲಾಗುತ್ತಿದೆ ಎಂದು ಯೋಗಾನಂದ ಕಿಡಿಕಾರಿದರು.
10ಕೆಆರ್ ಎಂಎನ್ 1ಜೆಪಿಜಿಮಂಚನಾಯಕನಹಳ್ಳಿಯ ಕೋತಿ ಆಂಜನೇಯಸ್ವಾಮಿ ದೇವಾಲಯ ಬಳಿ ಗ್ರಾಮಸ್ಥರು ವಾಹನ ತಡೆದು ಪ್ರತಿಭಟನೆ ನಡೆಸಿದರು.