ಲೋಕ್ ಅದಾಲತ್: 8,437 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ

KannadaprabhaNewsNetwork |  
Published : Jul 14, 2024, 01:43 AM IST
13ಕೆಎಂಎನ್ ಡಿ14 | Kannada Prabha

ಸಾರಾಂಶ

ನೆನಗುದಿ ಬಿದ್ದಿದ್ದ ಒಟ್ಟು 10,445 ಪ್ರಕರಣಗಳಲ್ಲಿ 8437 ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ಬಗೆಹರಿಸಿದ ನ್ಯಾಯಾಧೀಶರು ದೂರುದಾರರಿಗೆ 9 ಕೋಟಿ, 5 ಲಕ್ಷದ, 84 ಸಾವಿರದ 228 ರು.ಪರಿಹಾರ ನೀಡುವಂತೆ ತೀರ್ಪು ನೀಡಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 10, 445 ಪ್ರಕರಣಗಳ ಪೈಕಿ 8,437 ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥ ಪಡಿಸಿದ ನ್ಯಾಯಾಧೀಶರು 9.5 ಲಕ್ಷಕ್ಕೂ ಮೀರಿ ಪರಿಹಾರಕ್ಕೆ ಆದೇಶ ನೀಡಿದರು.

ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಹಯೋಗದಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ ಹಿರಿಯ, ಪ್ರಧಾನ ಸಿವಿಲ್ ನ್ಯಾಯಾಲಯ ಹಾಗೂ ಅಪರ ಸಿವಿಲ್ ನ್ಯಾಯಾಲಯಗಳಲ್ಲಿ ನೆನಗುದಿ ಬಿದ್ದಿದ್ದ ಒಟ್ಟು 10,445 ಪ್ರಕರಣಗಳಲ್ಲಿ 8437 ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ಬಗೆಹರಿಸಿದ ನ್ಯಾಯಾಧೀಶರು ದೂರುದಾರರಿಗೆ 9 ಕೋಟಿ, 5 ಲಕ್ಷದ, 84 ಸಾವಿರದ 228 ರು ಪರಿಹಾರ ನೀಡುವಂತೆ ತೀರ್ಪು ನೀಡಿದರು.

ಅಪಘಾತ ಪ್ರಕರಣಗಳಲ್ಲಿ ನೊಂದವರಿಗೆ ವಿಮಾ ಕಂಪನಿಯಿಂದ 47 ಪ್ರಕರಣಗಳಲ್ಲಿ 3 ಕೋಟಿ, 42 ಲಕ್ಷದ, 38ಸಾವಿರದ 558 ರು. ಪರಿಹಾರವಾಗಿ ತೀರ್ಪು ನೀಡಿದರು.

ಕ್ರಿಮಿನಲ್ ಪ್ರಕರಣಗಳಲ್ಲಿ 11,533 ಚೆಕ್ ಬೌನ್ಸ್ ಪ್ರಕರಣದಲ್ಲಿ 3.96 ಲಕ್ಷ, 70 ಸಾವಿರ. ಬ್ಯಾಂಕ್‌ಗಳ ಸಾಲ ವಸೂಲಾತಿ ಮತ್ತು ಇತರ 61 ಸಿವಿಲ್ ವಾಜ್ಯಗಳಲ್ಲಿ ಒಂದು ಕೋಟಿ, 55 ಲಕ್ಷದ 22 ಸಾವಿರದ 593 ರು. ಪಾವತಿಸುವಂತೆ ಆದೇಶ ಹೊರಡಿಸಿದರು.

ಕೌಟುಂಬಿಕ ಕಲಹ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳನ್ನು ಉಭಯ ಕಕ್ಷಿದಾರರ ಸಮ್ಮುಖದಲ್ಲಿ ಬಗೆಹರಿಸಿದ ನ್ಯಾಯಾಧೀಶರು ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್.ಹರಿಣಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಅಜಿತ್ ದೇವರಮನಿ. ಒಂದನೇ ಅಪರ ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನ, ಎರಡನೇ ಅಪರ ಸಿವಿಲ್ ನ್ಯಾಯಾಧೀಶ ಎನ್.ವಿ.ಕೊನಪ್ಪ, ಮೂರನೇ ಅಪರ ನ್ಯಾಯಾಧೀಶ ಎಸ್.ಪಿ.ಕಿರಣ್, ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಂ ಡೇವಿಡ್, ಕಪನಿ ನಂಜೇಶ್ವರ, ವಕೀಲರ ಸಂಘದ ಅಧ್ಯಕ್ಷ ಎಂ.ಎನ್. ಶಿವಣ್ಣ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಲೋಕ ಅದಾಲತ್ ನಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ