ಬೀದರ್: ಬರುವ ಡಿ.9ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು ಇದರಲ್ಲಿ ಹೆಚ್ಚಿನ ಜನರು ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಸ್.ಕೆ ಕನಕಟ್ಟೆ ತಿಳಿಸಿದರು.
ಇದು ಈ ವರ್ಷದ ಕೊನೆಯ ಲೋಕ ಅದಾಲತ್ ಆಗಿರುವುದರಿಂದ ಕಳೆದ ಲೋಕ ಅದಾಲತ್ಗಿಂತ ಈ ಸಲ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ ಇದ್ದು, ಪ್ರಸ್ತುತ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ, ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣಗಳು, ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು. ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ ಎಂದರು.
ಈ ಹಿಂದೆ ಸೆ.9ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 21,791 ಪ್ರಕರಣಗಳನ್ನು ಇತ್ಯರ್ಥಪಡಿಸಿ, 23,18,42,717 ರು.ಗಳನ್ನು ವಸೂಲಾತಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಬಾಕಿ ಪ್ರಕರಣಗಳು, ವ್ಯಾಜಪೂರ್ವ ಪ್ರಕಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ನಗರಸಭೆ, ಪುರಸಭೆ, ಗ್ರಾಮ ಪಂಚಾಯಿತಿಗಳ ನೀರಿನ ತೆರಿಗೆ, ಬಿಎಸ್ಎನ್ಎಲ್ ಹಾಗೂ ಜೆಸ್ಕಾಂ ಬಾಕಿ ಬಿಲ್ಲುಗಳ ಪ್ರಕರಣಗಳು ಸೇರಿವೆ ಎಂದರು.2023ರ 1ನೇ ಜನವರಿಯಿಂದ ಜಿಲ್ಲೆಯಲ್ಲಿ ಒಟ್ಟು 27,424 ಪ್ರಕರಣಗಳು ಬಾಕಿ:
ರಾಜಿ ಆಗಿ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದಬಹುದು:
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಜಿ. ಸುರೇಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನ, ರಾಹುಲ್ ರೋಷನ, ಜೀವನ, ಯೋಹಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.