ಬಾಕಿಪ್ರಕರಣಗಳ ಇತ್ಯರ್ಥಕ್ಕೆ 13 ರಂದು ಲೋಕ ಅದಾಲತ್ : ನ್ಯಾ.ರಘುನಾಥ ಗೌಡ

KannadaprabhaNewsNetwork |  
Published : Dec 02, 2025, 01:45 AM IST
 ನರಸಿಂಹರಾಜಪುರ ನ್ಯಾಯಾಲಯದ ಆವರಣದಲ್ಲಿ ಲೋಕ್ ಅದಾಲತ್ ನಡೆಸುವ ಬಗ್ಗೆ ನ್ಯಾಯಾಧೀಶ  ಕೆ.ಟಿ.ರಘುನಾಥ ಗೌಡ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ನರಸಿಂಹರಾಜಪುರ: ಕಕ್ಷಿದಾರರು ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್‌ಗೌಡ ಹೇಳಿದರು.

ನರಸಿಂಹರಾಜಪುರ: ಕಕ್ಷಿದಾರರು ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್‌ಗೌಡ ಹೇಳಿದರು.

ಶುಕ್ರವಾರ ನ್ಯಾಯಾಲಯದ ಆವರಣದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಪೂರ್ವ ಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಿ.13 ರಂದು ಬೆಳಿಗ್ಗೆ 10.30 ರಿಂದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಸಲಾಗುವುದು. ಈ ಅದಾಲತ್‌ನಲ್ಲಿ ಕಕ್ಷಿದಾರರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣವೇ ಪರಿಹರಿಸಿಕೊಳ್ಳಲು ಒಂದು ಸುವರ್ಣವಕಾಶ ಒದಗಿಸಲಾಗಿದೆ. ರಾಜಿ ಆಗಬಲ್ಲ ಅಪರಾಧ, ಬ್ಯಾಂಕ್ ವಸೂಲಾತಿ, ಕುಟುಂಬ ನ್ಯಾಯಾಲಯದ, ಚೆಕ್ ಅಮಾನ್ಯ, ರಾಜಿ ಆಗಬಲ್ಲ ಸಿವಿಲ್ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದ ಪ್ರಕರಣಗಳನ್ನು ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಈ ಅದಾಲತ್‌ನಲ್ಲಿ ಸೂಕ್ತ ಮಾರ್ಗದರ್ಶನ ನೀಡಲಿದ್ದೇವೆ. ಇಬ್ಬರಿಗೂ ಒಪ್ಪಿಗೆ ಆಗುವಂತೆ ಪ್ರಕರಣ ಇತ್ಯರ್ಥವಾಗುವುದರಿಂದ ಬಾಂಧವ್ಯವೂ ಉಳಿದು, ವಿವಾದವೂ ತೀರ್ಮಾನವಾಗುತ್ತದೆ.

ನ್ಯಾಯಾಲಯದಲ್ಲಿ ಈಗಾಗಲೇ ಇತ್ಯರ್ಥವಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕ ಸಂಪೂರ್ಣವಾಗಿ ಹಿಂದಿರುಗಿಸಲಾಗುವುದು ಎಂದರು. ಕಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ಮಾತನಾಡಿ,ಲೋಕ ಅದಾಲತ್‌ನಲ್ಲಿ ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆ ಆದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಅತ್ಯಂತ ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದು ಜನರಿಗೆ ಒಂದು ಸುವರ್ಣಾವಕಾಶ. ಹೆಚ್ಚಿನ ಮಾಹಿತಿಗೆ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು. ಈ ಲೋಕ ಅದಾಲತ್‌ನ ಬಗ್ಗೆ ಕಕ್ಷಿದಾರರಿಗೆ ಹೆಚ್ಚಿನ ಮಾಹಿತಿ ನೀಡುವಂತೆ ಸಭೆಯಲ್ಲಿದ್ದ ಎಲ್ಲಾ ವಕೀಲರು ಹಾಗೂ ಪೊಲೀಸರಿಗೆ ಸೂಚಿಸಿದರು. ಸಭೆಯಲ್ಲಿ ಸರ್ಕಾರಿ ಅಭಿಯೋಜಕ ಗದಿಗೆಪ್ಪನೇಕಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಜಯಪ್ರಕಾಶ್, ವಕೀಲರಾದ ಎನ್.ವಿ.ಸುಜಯ್,ಎಂ.ಆರ್.ಶಿವಪ್ರಸಾದ್, ವಿದ್ವತ್ ಗೌಡ, ಪೌಲ್‌ ಚೆರಿಯನ್, ತಾ.ಪಂ. ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ, ಪೊಲೀಸ್ ಇಲಾಖೆ ಅಧಿಕಾರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ