ಚುನಾವಣಾ ಪ್ರಚಾರದಲ್ಲಿ ಸಿಎಂ, ಡಿಸಿಎಂ ಭಾಗಿ

KannadaprabhaNewsNetwork |  
Published : Apr 09, 2024, 12:45 AM ISTUpdated : Apr 09, 2024, 10:55 AM IST
DK shivakumar And siddaramaiah

ಸಾರಾಂಶ

ಏ. 13 ರಂದು ಬೆಳಗ್ಗೆ 11ಕ್ಕೆ ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬೂತಾಳೆ ಮೈದಾನ, ಮಧ್ಯಾಹ್ನ 2 ಗಂಟೆಗೆ ಹುಣಸೂರಿನ ಪುರಭವನ ಮತ್ತು ಸಂಜೆ 5 ಗಂಟೆಗೆ ಪಿರಿಯಾಪಟ್ಟಣದ ಕಾಂಗ್ರೆಸ್ ಕಚೇರಿ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸುವರು.

 ಮೈಸೂರು :  ಮೈಸೂರು ನಗರ, ಜಿಲ್ಲೆ ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ಸಮಿತಿಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಚುನಾವಣಾ ಪ್ರಚಾರದ ವೇಳಾಪಟ್ಟಿ ಬಿಡುಗಡೆಗೊಳಿಸಿದೆ.

ಏ. 13 ರಂದು ಬೆಳಗ್ಗೆ 11ಕ್ಕೆ ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬೂತಾಳೆ ಮೈದಾನ, ಮಧ್ಯಾಹ್ನ 2 ಗಂಟೆಗೆ ಹುಣಸೂರಿನ ಪುರಭವನ ಮತ್ತು ಸಂಜೆ 5 ಗಂಟೆಗೆ ಪಿರಿಯಾಪಟ್ಟಣದ ಕಾಂಗ್ರೆಸ್ ಕಚೇರಿ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸುವರು.

ಏ. 14ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ, ಸಂಜೆ 5 ಗಂಟೆಗೆ ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಜೀಜ್ಸೇಠ್ ಕಾಲೋನಿ ಎದುರಿನ ಮೈದಾನದಲ್ಲಿ ಈ ಇಬ್ಬರೂ ಚುನಾವಣಾ ಪ್ರಚಾರ ನಡೆಸುವರು.

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಏ. 12 ರಂದು ಮಧ್ಯಾಹ್ನ 2 ಗಂಟೆಗೆ ಕಳಲೆ ಗೇಟ್ಬಳಿ, ಸಂಜೆ 6 ಗಂಟೆಗೆ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಸಂತೇಮಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ಸೇಠ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ಮೊದಲಾದವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲಾತಿಗೆ ಬಂಜಾರ ಸಮಾಜದ ವಿರೋಧ
ಜಿಲ್ಲೆಗೆ ಒಲಿದುಬಂದ 17ಕ್ಕೂ ಅಧಿಕ ಕೊಡುಗೆಗಳು