ಕನ್ನಡಪ್ರಭ ವಾರ್ತೆ ಹಾವೇರಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾ ನಿರ್ವಹಣೆ ವ್ಯವಸ್ಥೆ ತಂತ್ರಾಂಶದಲ್ಲಿ ಸಿಬ್ಬಂದಿ ಮಾಹಿತಿ ದಾಖಲಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆ ಸುಸೂತ್ರವಾಗಿ ನಡೆಯಲು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ನಿಖರವಾದ ಮಾಹಿತಿ ಅಗತ್ಯವಾಗಿದೆ. ಎಚ್.ಆರ್.ಎಂ.ಎಸ್. ನಲ್ಲಿರುವ ಸಿಬ್ಬಂದಿ ವಿವರವನ್ನು ಕಾಲೋಚಿತಗೊಳಿಸಿ, ಸದರಿ ಮಾಹಿತಿಯನ್ನು ಎಲೆಕ್ಸನ್ ಮ್ಯಾನೇಜಮೆಂಟ್ ಸಿಸ್ಟಂ ಆ್ಯಪ್ನಲ್ಲಿ ದಾಖಲಿಸಬೇಕು ಎಂದು ಸೂಚನೆ ನೀಡಿದರು.
ಚುನಾವಣಾ ಕಾರ್ಯಕ್ರಮಗಳು ಯಶಸ್ವಿಯಾಗಲು ಮತಪೆಟ್ಟಿಗೆಗಳು, ಮತಗಟ್ಟೆಗಳು ಹಾಗೂ ಮತಗಟ್ಟೆ ಕೇಂದ್ರದ ಅಧಿಕಾರಿಗಳು, ಸಹಾಯಕ ಅಧಿಕಾರಿಗಳು ಹಾಗೂ ಚುನಾವಣಾ ಕಾರ್ಯದ ವಿವಿಧ ಸಮಿತಿಗಳ ಸದಸ್ಯರ ಪಾತ್ರ ಬಹುಮುಖ್ಯವಾಗಿದೆ. ಈ ಹಿನ್ನೆಲೆ ಇಲಾಖೆಗಳಲ್ಲಿ ಕೆಲಸ ಮಾಡುವ ಎಲ್ಲ ನೌಕರರ ಮಾಹಿತಿ ಕಡ್ಡಾಯವಾಗಿ ನೀಡಬೇಕು. ಇಲಾಖಾ ಅಧಿಕಾರಿಗಳ ಹಂತದಲ್ಲಿ ಚುನಾವಣಾ ಕಾರ್ಯಕ್ಕೆ ವಿನಾಯಿತಿ ನೀಡಲು ಅವಕಾಶವಿಲ್ಲ. ಕಾರಣ ವಿಶೇಷಚೇತನರು, ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವವರು, ೫೯ ವರ್ಷ ಮೇಲ್ಪಟ್ಟವರ ಮಾಹಿತಿಯನ್ನು ದಾಖಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.೧೦ ಸಾವಿರ ಸಿಬ್ಬಂದಿ:
ಉಪನ್ಯಾಸಕ ಅರವಿಂದ ಐರಣಿ ಮಾತನಾಡಿ, ಹಾವೇರಿ ಎನ್ಐಸಿ ಅಧಿಕಾರಿಗಳು ಚುನಾವಣಾ ನಿರ್ವಹಣಾ ವ್ಯವಸ್ಥೆಯ ತಂತ್ರಾಂಶ ಅಭಿವೃದ್ಧಿಪಡಿಸಿದ್ದು, ಎಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿರುವ ಅಧಿಕಾರಿ, ಸಿಬ್ಬಂದಿ ಮಾಹಿತಿಯನ್ನು ಪುನರ್ ಪರಿಶೀಲಿಸಿ ಸಿಬ್ಬಂದಿ ಹೆಸರು, ಹುದ್ದೆ, ಕೆಲಸದ ಸ್ಥಳ, ಲಿಂಗ, ವೇತನ ಶ್ರೇಣಿ, ಮತದಾನ ಇರುವ ಕ್ಷೇತ್ರ, ಮತಗಟ್ಟೆ ಸಂಖ್ಯೆ, ಎಪಿಕ್ ಕಾರ್ಡ್ ನಂಬರ್, ಮತದಾರರ ಪಟ್ಟಿಯ ಪಾರ್ಟ್ ನಂಬರ್, ಕ್ರಮ ಸಂಖ್ಯೆ, ಸಿಬ್ಬಂದಿಯ ಐ.ಎಫ್.ಎಸ್.ಕೋಡ್ ಸಹಿತ ಬ್ಯಾಂಕ್ ಖಾತೆ ವಿವರ ಹಾಗೂ ಕೋವಿಡ್ ಲಸಿಕೆ ಪಡೆದ ಮಾಹಿತಿಯನ್ನು ಇಎಂಎಸ್ ಸಾಫ್ಟವೇರ್ನಲ್ಲಿ ಕೇಸ್ವಾನ್ ಅಥವಾ ನೆಕ್ನೆಟ್ನಲ್ಲಿ ದಾಖಲಿಸಬೇಕು. ಮಾಹಿತಿ ಅತ್ಯಂತ ಗೌಪ್ಯವಾಗಿ ಇರಬೇಕು. ಸೋರಿಕೆಯಾಗಬಾರದು, ಸಿಬ್ಬಂದಿ ವಿವರದ ಷರಾದಲ್ಲಿ ತೀವ್ರತರ ಕಾಯಿಲೆ ಹಾಗೂ ವಿಶೇಷಚೇತನತೆಯನ್ನು ನಮೂದಿಸಬಹುದು. ಕಚೇರಿಯ ಇ.ಎಸ್.ಟಿ. ಸಿಬ್ಬಂದಿಗೆ ಮಾಹಿತಿ ದಾಖಲಿಸುವ ಕುರಿತಂತೆ ಪ್ರತ್ಯೇಕ ತರಬೇತಿ ಆಯೋಜಿಸಲಾಗುವುದು. ಪ್ರತಿ ಇಲಾಖೆಗೆ ಪ್ರತ್ಯೇಕ ಯುಸರ್ನೇಮ್ ಹಾಗೂ ಪಾಸವರ್ಡ್ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಚುನಾವಣಾ ಶಿರಸ್ತೇದಾರ ಖಾನ್, ವಿವಿಧ ಇಲಾಖೆಗಳ ಮುಖ್ಯಸ್ಥರು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.