ಕನ್ನಡಪ್ರಭವಾರ್ತೆ ಶಿರಾಳ ಕೊಪ್ಪ
ಲೋಕಾಯುಕ್ತ ಇಲಾಖೆ ಚುನಾವಣೆ ಸಂದರ್ಭದಲ್ಲಿ ಮುಡಾ ಪ್ರಕರಣ ಸಂಬಂಧ ನೋಟೀಸ್ ಕೊಟ್ಟಿದೆ. ಮೊನ್ನೆ ನೋಟಿಸ್ ನೀಡಿ ತಕ್ಷಣ ತನಿಖೆಗೆ ಹೋಗುವಾಗ ಜತೆಯಲ್ಲಿ ಶಾಸಕ ಹೊನ್ನಣ್ಣ ಅವರನ್ನು ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೂ ಕರೆದುಕೊಂಡು ಹೋಗಿರುವುದು ಲೋಕಾಯುಕ್ತದ ಮೇಲೆ ಅನುಮಾನ ಬರುವಂತೆ ಮಾಡಿದೆ ಎಂದರು.
ಹೈಕೋರ್ಟ್ನಲ್ಲಿ ಸಿಬಿಐ ತನಿಖೆಗೆ ಕೊಡಬೇಕು ಎಂದು ಎಮರ್ಜನ್ಸಿ ನೋಟೀಸ್ ಕೂಡ ಕೊಡಲಾಗಿದೆ.ಇಂತಹ ಚರ್ಚೆ ನಡೆಯುತ್ತಿರುವಾಗ ಲೋಕಾಯುಕ್ತ ಇಲಾಖೆ ಮೇಲೆ ಒತ್ತಡ ಹೇರಲಾಗುತ್ತಿದ್ದು, ಈ ನಡೆ ಆತುರದಲ್ಲಿ ನಡೆಸುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ರಾಜ್ಯದ ಉಪಚಾನಾವಣೆ ಬಗ್ಗೆ ಪತ್ರಿಕೆಯವರು ಪಶ್ನಿಸಿದಾಗ, ಶಿಗ್ಗಾವಿಯಲ್ಲಿ ಭರತ್ ಬೊಮ್ಮಯಿ, ಸಂಡೂರುನಲ್ಲಿ ಬಂಗಾರು ಹನುಮಂತ ಹಾಗೂ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರ ಸ್ವಾಮಿ ಅವರು ಗೆಲ್ಲುವ ವಾತಾವರಣ ನಿರ್ಮಾಣ ಉಂಟಾಗಿದೆ. ಇಂದು ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಆತ್ಮಹತ್ಯೆ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಯಾವುದೇ ಅಭಿವೃದ್ಧಿಗೆ ಹಣವಿಲ್ಲ. ಇದೊಂದು ಜನವಿರೋಧಿ ಸರ್ಕಾರ. ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಮತದಾರರೇ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರುರಾಜ್ಯದಲ್ಲಿ ಅತಿವೃಷ್ಠಿಯಿಂದ ಜನರು ನರಳುತ್ತಿದ್ದಾರೆ. ತಮಗೆ ಸಂಬಂಧವಿಲ್ಲ ಎಂಬಂತೆ ಮುಖ್ಯಮಂತ್ರಿ ಇದ್ದಾರೆ. ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ರೀತಿ ಇದೇನಾ ಎಂದು ಪ್ರಶ್ನಿಸಿದ ವಿಜಯೇಂದ್ರ, ರಾಜ್ಯ ಸರ್ಕಾರದ ಎಲ್ಲ ಸಚಿವರು, ಶಾಸಕರು ಉಪ ಚುನಾವಣೆಯಲ್ಲಿ ಮುಳುಗಿದ್ದಾರೆ. ಒಂದೊಂದು ಕ್ಷೇತ್ರಕ್ಕೆ 7-8 ಮಂತ್ರಿಗಳು ಇದ್ದಾರೆ. ಪ್ರತಿ ಗ್ರಾಪಂಗೆ ಒಬ್ಬ ಶಾಸಕರು ಇದ್ದು ಚುನಾವಣೆಯಲ್ಲಿ ಮುಳಗಿದ್ದಾರೆ. ಆದಷ್ಟು ಬೇಗ ಈ ಸರ್ಕಾರ ತೊಲಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಚೆನ್ನವೀರಶಟ್ಟಿ, ಮಾಜಿ ಅಧ್ಯಕ್ಷ ಮಂಚಿ ಶಿವಣ್ಣ, ಕಾರ್ಯದರ್ಶಿ ರವಿ ಶಾನಭೋಗ, ಎಚ್. ಎಂ. ಚಂದ್ರಶೇಖರ, ದಿವಾಕರ್ ಸೇರಿದಂತೆ ಹಲವರು ಹಾಜರಿದ್ದರು.