ಕನ್ನಡಪ್ರಭ ವಾರ್ತೆ ಬೇಲೂರು
ಲೋಕಾಯುಕ್ತ ಎಸ್.ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ ತಿರುಮಲೇಶ್, ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಬಾಲು,ಶಿಲ್ಪ ಹಾಗು ಚಿಕ್ಕಮಗಳೂರಿನ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಉತ್ತರ ಭಾಗದ ದಾಸನಪುರ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್ -1 ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿಯ ಎನ್.ಎಂ ಜಗದೀಶ್ ಎಂಬುವವರ ಪೀಣ್ಯದ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ, ಅರೇಹಳ್ಳಿ ಹೋಬಳಿಯ ವಾಟೇಹಳ್ಳಿಯ ಬಳಿ ಸ್ವಂತ ಜಮೀನು ಹಾಗು ಕಟ್ಟಡವನ್ನು ಹೊಂದಿದ್ದಾರೆ ಎನ್ನಲಾದ ಹಿನ್ನೆಲೆ ಗುರುವಾರ ಮುಂಜಾನೆ ಸುಮಾರು 6 ಘಂಟೆಯ ಹೊತ್ತಿಗೆ ಅಧಿಕಾರಿಗಳ ತಂಡ ವಾಟೆಹಳ್ಳಿಯ ನಿವಾಸದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.