ಹುಬ್ಬಳ್ಳಿ:
ದುರ್ಘಟನೆಗೆ ರಸ್ತೆ ಮಾರ್ಗಮಧ್ಯದಲ್ಲಿ ಶ್ವಾನ ಬಂದಿದ್ದೇ ಕಾರಣ ಎಂಬುದು ಎಫ್ಐಆರ್ನಲ್ಲಿ ದಾಖಲಾಗಿರುವ ಮಾಹಿತಿಯಿಂದ ತಿಳಿದುಬಂದಿದೆ.
ಪಂಚಾಕ್ಷರಯ್ಯ ಅವರು ಹುಬ್ಬಳ್ಳಿಯಿಂದ ಅಣ್ಣಿಗೇರಿ ಮಾರ್ಗವಾಗಿ ಗದಗಗೆ ಕಾರು ಚಲಾಯಿಸಿಕೊಂಡು ವೇಗವಾಗಿ ತೆರಳುತ್ತಿದ್ದ ವೇಳೆ ಭದ್ರಾಪುರ ಬಳಿಯ ಆರೇರ್ ಬ್ರಿಡ್ಜ್ ಹತ್ತಿರ ದಿಢೀರ್ ಶ್ವಾನ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಇದರಿಂದ ಕಾರಿನಲ್ಲಿ ಬೆಂಕಿ ಆವರಿಸಿಕೊಂಡು ಕಾರಿನಿಂದ ಹೊರಬರದೆ ಸಜೀವ ದಹನವಾಗಿದ್ದಾರೆ.ಫೈಲ್ ತರಲು ಹೋಗುತ್ತಿದ್ದರು:
ಮೃತ ಇನ್ಸ್ಪೆಕ್ಟರ್ ಸಾಲಿಮಠಗೆ ಅಂತಿಮ ನಮನಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಸಜೀವ ದಹನವಾದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗಾವಿ ಜಿಲ್ಲೆಯ ಮುರಗೋಡ ಗ್ರಾಮಕ್ಕೆ ರವಾನಿಸಲಾಯಿತು.ಘಟನೆಯ ನಂತರ ಶುಕ್ರವಾರ ರಾತ್ರಿ ಮೃತದೇಹವನ್ನು ಇಲ್ಲಿಯ ಕೆಎಂಸಿಆರ್ಐ ಶವಗಾರಕ್ಕೆ ರವಾನಿಸಲಾಗಿತ್ತು. ಶನಿವಾರ ಬೆಳಗ್ಗೆ ವೈದ್ಯರು ಮೃತದೇಹವನ್ನು ಪರಿಶೀಲಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ವೇಳೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ, ಎಸ್ಪಿ ಗುಂಜನ್ ಆರ್ಯ, ಡಿಸಿಪಿ ಮಹಾನಿಂಗ ನಂದಗಾವಿ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೇ, ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಸಾಗಿಸಲು ಪೂರಕ ವ್ಯವಸ್ಥೆ ಕಲ್ಪಿಸಿದರು.
ಇದೇ ವೇಳೆ ಹು-ಧಾ ಪೊಲೀಸ್ ಕಮಿಷನರೇಟ್ನಿಂದ ಕಮಿಷನರ್ ನೇತೃತ್ವದಲ್ಲಿ ಅಂತಿಮ ನಮನ ಸಲ್ಲಿಸಿ ಗೌರವ ಸೂಚಿಸಿದರು. ಜಿಲ್ಲಾ ಪೊಲೀಸ್ ಘಟಕದಿಂದ ಎಸ್ಪಿ ನೇತೃತ್ವದಲ್ಲಿ ಗೌರವ ಸಮರ್ಪಣೆ ಮಾಡಲಾಯಿತು. ನಂತರ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.ಕೆಎಂಸಿಆರ್ಐನಿಂದ ಹೊರಟ ಮೃತದೇಹಕ್ಕೆ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲೂ ಪಿಐ ನೇತೃತ್ವದಲ್ಲಿ ಗೌರವ ಸಮರ್ಪಣೆ ನಡೆಯಿತು. ನಂತರ ಧಾರವಾಡ ಜಿಲ್ಲಾ ಪೊಲೀಸ್ ಘಟಕದ ಗರಗ ಪೊಲೀಸ್ ಠಾಣೆಯಲ್ಲೂ ಸಿಪಿಐ ಶಿವಯೋಗಿ ಲೋಹಾರ ನೇತೃತ್ವದಲ್ಲಿ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು. ಅಲ್ಲಿಂದ ನೇರ ಬೈಲಹೊಂಗಲ ಮಾರ್ಗವಾಗಿ ಸ್ವಗ್ರಾಮ ಮುರಗೋಡಕ್ಕೆ ಸಾಗಿಸಲಾಯಿತು. ನಂತರ ಧಾರ್ಮಿಕ ವಿಧಿ-ವಿಧಾನ ಮತ್ತು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.