ಕುಂದಾಪುರ ಸರ್ವೆ ಕಚೇರಿಗೆ ಲೋಕಾಯುಕ್ತ ದಾಳಿ: ಬಾಕಿ ಅರ್ಜಿ ಪರಿಶೀಲನೆ

KannadaprabhaNewsNetwork |  
Published : Aug 29, 2026, 01:45 AM IST
ಕುಂದಾಪುರ ಸರ್ವೇ ಕಚೇರಿಗೆ ಲೋಕಾಯುಕ್ತ ದಾಳಿ ನಡೆಯಿತು.  | Kannada Prabha

ಸಾರಾಂಶ

ಕುಂದಾಪುರ ತಾಲೂಕಿನಲ್ಲಿ ಸರ್ಕಾರಿ ಕಚೇರಿಗಳ ಕಾರ್ಯವೈಖರಿ ಹಾಗೂ ಬಾಕಿ ಅರ್ಜಿಗಳ ಕುರಿತು ಮಾಹಿತಿ ಕಲೆ ಹಾಕುತ್ತಿರುವ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿಯಿತು.

ಕುಂದಾಪುರ: ಕುಂದಾಪುರ ತಾಲೂಕಿನಲ್ಲಿ ಸರ್ಕಾರಿ ಕಚೇರಿಗಳ ಕಾರ್ಯವೈಖರಿ ಹಾಗೂ ಬಾಕಿ ಅರ್ಜಿಗಳ ಕುರಿತು ಮಾಹಿತಿ ಕಲೆ ಹಾಕುತ್ತಿರುವ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿಯಿತು. ಪಟ್ಟಣದ ಸರ್ವೆ ಇಲಾಖೆಯ ಕಚೇರಿಗೆ ಭೇಟಿ ನೀಡಿದ ಲೋಕಾಯುಕ್ತ ತಂಡ ಬಾಕಿ ಉಳಿದಿರುವ ಅರ್ಜಿಗಳು ಹಾಗೂ ಅವುಗಳ ವಿಲೇವಾರಿ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿತು. ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಬೆಳಗ್ಗೆ ಆಗಮಿಸಿದ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಮಂಜುನಾಥ್ ಶಂಕರಳ್ಳಿ ನೇತೃತ್ವದ ಅಧಿಕಾರಿಗಳ ತಂಡ, ವಿವಿಧ ಅರ್ಜಿಗಳ ಸ್ಥಿತಿಗತಿ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿತು. ಬಾಕಿ ಅರ್ಜಿಗಳು ಯಾವ ಹಂತದಲ್ಲಿವೆ ಮತ್ತು ಅವುಗಳ ವಿಲೇವಾರಿಗೆ ವಿಳಂಬವಾಗಿರುವ ಕಾರಣಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದರು.ಬೆಳಗ್ಗೆಯಿಂದ ಸಂಜೆಯವರೆಗೂ ಕಚೇರಿಯಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ವೀಕ್ಷಿಸಿ, ಸಂಬಂಧಿಸಿದ ಮಾಹಿತಿಯನ್ನು ದಾಖಲಿಸಿಕೊಂಡರು.

ಲೋಕಾಯುಕ್ತ ಸಿಬ್ಬಂದಿಯಾದ ರಾಘವೇಂದ್ರ ಹೊಸ್ಕೋಟೆ, ಆದರ್ಶ, ರಾಘವೇಂದ್ರ ಸಾಲಿಗ್ರಾಮ, ಸೂರಜ್ ಕಾಪು, ರವೀಂದ್ರ ಗಾಣಿಗ ಹಾಗೂ ಅರುಣ್ ಕುಮಾರ್ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2028ರಲ್ಲಿ ಉಡುಪಿಯಲ್ಲಿ ವಿಶ್ವ ತುಳುವ ಮಹಾಸಭೆ
ಪತ್ರಕರ್ತರ ಮೇಲೆ ಹಲ್ಲೆ ಖಂಡನೀಯ: ಸುಧೀರ್‌ ಕುಮಾರ್‌