ಕನ್ನಡಪ್ರಭ ವಾರ್ತೆ ಮೂಡಲಗಿ
ಭಾರತದ ಸಂಯಮತೆಯನ್ನು ವೈರಿ ರಾಷ್ಟ್ರ ಪಾಕಿಸ್ತಾನ ದುರಪಯೋಗ ಪಡಿಸಿಕೊಂಡಾಗ ಇಡಿ ಜಗತ್ತೇ ನಿಬ್ಬೆರಗಾಗುವಂತೆ ದಾಳಿ ಮಾಡಿರುವ ಭಾರತದ ಸೈನಿಕರ ಬಲ ಜಗಜ್ಜಾಹೀರಾಗಿದೆ. ಹೀಗಾಗಿ ತಮ್ಮ ಪ್ರಾಣವನ್ನೇ ಒತ್ತೆಯಿಟ್ಟು ಗಡಿಯಲ್ಲಿ ರಕ್ಷೆಣೆ ಮಾಡುತ್ತಿರುವ ಸೈನಿಕರ ನೈತಿಕ ಬಲ ಕುಗ್ಗುವಂತಹ ಯಾವುದೇ ಹೇಳಿಕೆಗಳನ್ನು ನೀಡಬಾರದೆಂದು ವಿರೋಧಿಗಳಿಗೆ ಆಗ್ರಹಿಸಿದರು.
ರಾಜಾಪೂರ ಗ್ರಾಮದ ಜಾತ್ರೆ ತಾಲೂಕಿನಲ್ಲಿ ಒಂದು ಮಾದರಿ ಜಾತ್ರೆಯಾಗಿದೆ. ದಾಖಲೆಯ ಪ್ರಮಾಣದಲ್ಲಿ ಜನ ಸೇರುವ ಮೂಲಕ ಈ ಜಾತ್ರೆಯ ವೈಭವ ಇನ್ನಷ್ಟು ಹೆಚ್ಚಾಗಿದೆ ಮತ್ತು ಜಾತ್ರೆಯಲ್ಲಿ ಕೈಗೊಂಡಿರುವ ಅಚ್ಚುಕಟ್ಟಾದ ಕ್ರಮಗಳು, ಊಟೋಪಚಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಮಹೋತ್ಸವಗಳು ಉಲ್ಲೇಖನೀಯವಾಗಿದ್ದು ಬರುವ ದಿನಗಳಲ್ಲಿ ನಾವೆಲ್ಲ ರೈತರಾಗಿದ್ದು ರೈತರಿಗೆ ಸಂಬಂಧಪಟ್ಟಂತಹ ಕೃಷಿ ಮೇಳಗಳನ್ನು ಆಯೋಜಿಸುವುದು ಅಗತ್ಯವಾಗಿದೆ ಎಂದು ವ್ಯವಸ್ಥಾಪಕರಿಗೆ ಸಲಹೆ ನೀಡಿದರು ಮತ್ತು ಎಲ್ಲಾ ವ್ಯವಸ್ಥೆ ಏರ್ಪಡಿಸಿದ ಗ್ರಾಮದ ಹಿರಿಯರು ಮತ್ತು ಯುವ ಮುಖಂಡರಿಗೆ ಧನ್ಯವಾದ ತಿಳಿಸಿದರು.ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಲ್ಲಿ ಚೂನಮ್ಮಾದೇವಿ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ₹25 ಲಕ್ಷ ಹಾಗೂ ಮುಜರಾಯಿ ಇಲಾಖೆಯಿಂದ ₹5 ಲಕ್ಷ ಮಂಜೂರಾತಿಯಾಗಿದೆ ಎಂದರು. ಕಲ್ಲೋಳಿ ರಾಜಾಪೂರ ಕೊರೆವ್ವನ ಹಳ್ಳದ ಹತ್ತಿರ ₹1 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೆಜ್ ನಿರ್ಮಿಸಲಾಗಿದೆ. ಗ್ರಾಮದ ಅಭಿವೃದ್ಧಿಗಾಗಿ ರಸ್ತೆ, ಕುಡಿವ ನೀರು ಸೌಲಭ್ಯ ಹಾಗೂ ಕನಕ ಭವನ ನಿರ್ಮಿಸಿದನ್ನು ಸ್ಮರಿಸಿದರು ಹಾಗೂ ಮುಂಬರುವ ದಿನಗಳಲ್ಲಿ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ನನ್ನ ಸಹಕಾರ ಇದ್ದೇ ಇರುತ್ತದೆ ಗ್ರಾಮಸ್ಥರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ವಿಠ್ಠಲ ಪಾಟೀಲ, ಬೈರು ಯಕ್ಕುಂಡಿ, ರಾಜು ಬೈರುಗೋಳ, ರಾಮಚಂದ್ರ ಪಾಟೀಲ, ಬಸವರಾಜ ಪಂಡ್ರೋಳಿ, ಶಿವಾನಂದ ಕಮತಿ, ರಾಜು ಪವಾರ, ಕೆಂಪಣ್ಣ ಗಡಹಿಂಗ್ಲೆಜ್, ಸಿದ್ದಪ್ಪ ಜೆಟ್ಟೆನ್ನವರ ಗ್ರಾ.ಪಂ ಅಧ್ಯಕ್ಷೆ ರೇಣುಕಾ ಕಮತಿ, ರಾಮಚಂದ್ರ ಕೊಡ್ಲಿ, ಬಸವರಾಜ ಹೊಸುರ, ಶಿವಪುತ್ರ ಗುಂಡಪ್ಪಗೋಳ, ಶ್ರೀನಾಥ ಬೈರುಗೋಳ, ವಿಠ್ಠಲ ಸಿಂಗಾರಿ, ಸಿದ್ದು ಯಕ್ಕುಂಡಿ, ಸುಭಾಸ ಎಣ್ಣಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.