ಬೈಕಿಗೆ ಲಾರಿ ಡಿಕ್ಕಿ: ಪೇದೆ ಸ್ಥಳದಲ್ಲೆ ಸಾವು

KannadaprabhaNewsNetwork |  
Published : Jul 11, 2024, 01:35 AM IST
ಫೋಟೋ: 10 ಹೆಚ್‌ಎಸ್‌ಕೆ 5ಮೃತ ದಾದಾವಲಿ ಭಾವಚಿತ್ರ. | Kannada Prabha

ಸಾರಾಂಶ

ಹೊಸಕೋಟೆ: ಕರ್ತವ್ಯಕ್ಕೆ ಪೊಲೀಸ್ ಠಾಣೆಗೆ ತೆರಳುತ್ತಿದ್ದ ಪೇದೆಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪೇದೆ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಚನ್ನಸಂದ್ರ ಬಳಿ ನಡೆದಿದೆ.

ಹೊಸಕೋಟೆ: ಕರ್ತವ್ಯಕ್ಕೆ ಪೊಲೀಸ್ ಠಾಣೆಗೆ ತೆರಳುತ್ತಿದ್ದ ಪೇದೆಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪೇದೆ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಚನ್ನಸಂದ್ರ ಬಳಿ ನಡೆದಿದೆ. ತಾಲೂಕಿನ ಅನುಗೊಂಡನಹಳ್ಳಿ ಠಾಣೆಯ ಪೇದೆ ದಾದಾವಲಿ(33) ಮೃತ ಪಟ್ಟವರು. ಮೃತರು ಮೂಲತಃ ಬಳ್ಳಾರಿ ಜಿಲ್ಲೆಯ ಶಿರಗುಪ್ಪದವರಾಗಿದ್ದು ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ರಾತ್ರಿ ಕಾಡುಗೋಡಿಯ ಪೊಲೀಸ್ ವಸತಿ ಸಮುಚ್ಚಯದಿಂದ ಕರ್ತವ್ಯಕ್ಕೆ ಬರುವ ವೇಳೆ ಚನ್ನಸಂದ್ರ ಬಸ್ ನಿಲ್ದಾಣದ ಬಳಿ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ಪೇದೆ ದಾದಾವಲಿಯ ಅಂತ್ಯಸಂಸ್ಕಾರ ಸ್ವಗ್ರಾಮ ಶಿರಗುಪ್ಪದಲ್ಲಿ ನೆರವೇರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಶಾಲೆ ದುಬೈ ವಾರ್ಷಿಕೋತ್ಸವಕ್ಕೆ ಗೌರ್ನರ್‌ಗೆ ಆಹ್ವಾನ
ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್