ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗಳಲ್ಲಿ ಮತದಾರರಿಗೆ ಹಣದ ಆಮಿಷ ನೀಡುವುದೇ ಅಪರಾಧ. ಆದರೆ, ಕೆ.ರಾಮಚಂದ್ರ ಮತದಾರರಿಗೆ ಹಣಕೊಟ್ಟು ಚುನಾವಣೆಯಲ್ಲಿ ಗೆಲುವು ಸಾಧಿಸಲು ತಂತ್ರರೂಪಿಸಿ ಸೋಲುಂಡಿದ್ದಾರೆ. ಮತದಾರರ ಬಳಿ ಹೋಗಿ ಕೊಟ್ಟಿರುವ ಹಣ ವಾಪಸ್ಸು ನೀಡುವಂತೆ ಧಮ್ಕಿ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ಮನ್ಮುಲ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಸಿ.ಶಿವಕುಮಾರ್ ಅಧಿಕ ಮತಕೊಟ್ಟು ಅಭೂತ ಪೂರ್ವ ಗೆಲುವು ತಂದುಕೊಟ್ಟ ತಾಲೂಕಿ ಹಾಲು ಉತ್ಪಾದಕರ ಸಂಘದ ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸಿದರು.ಪ್ರತಿಷ್ಠೆಯ ಕಣವಾಗಿದ್ದ ಮನ್ಮುಲ್ ಚುನಾವಣೆಯಲ್ಲಿ ರೈತಸಂಘ-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಗ್ಗೆ ವಿರೋಧಿ ಅಲೆ ವ್ಯಕ್ತವಾಗಿತ್ತು. ಕ್ಷೇತ್ರದ ಮತದಾರರು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜತೆಗೆ ಡೇರಿ ಅಭಿವೃದ್ಧಿ ಪರ ಉತ್ತಮವಾಗಿ ಕೆಲಸ ಮಾಡುವ ಒಳ್ಳೆಯ, ಪ್ರಾಮಾಣಿಕ ಅಭ್ಯರ್ಥಿ ಬೇಕೆಂದು ತೀರ್ಮಾನಿಸಿ ಸಿ.ಶಿವಕುಮಾರ್ಗೆ 98 ಮತಗಳನ್ನು ಕೊಟ್ಟು ಗೆಲ್ಲಿಸಿದ್ದಾರೆ ಎಂದರು.
ಮಳವಳ್ಳಿ ಕ್ಷೇತ್ರದಲ್ಲಿ ಸ್ವಲ್ಪ ಟೆಕ್ನಿಕಲ್ ಸಮಸ್ಯೆಯಿಂದ ನಮ್ಮ ಅಭ್ಯರ್ಥಿಗೆ ಸೋಲಾಗಿದೆ. ಅವರು ಕೋರ್ಟ್ ಮೆಟ್ಟಿಲೇರಿದ್ದು ನಮ್ಮ ಪರವಾಗಿ ಕೋರ್ಟ್ನಲ್ಲಿ ತೀರ್ಪು ಬರಲಿದೆ ಎನ್ನುವ ವಿಶ್ವಾಸವಿದೆ ಅಭಿಪ್ರಾಯ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ, ಮನ್ಮುಲ್ ಮಾಜಿ ನಿರ್ದೇಶಕ ಜಿ.ಈ.ರವಿಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಶ್ವಥ್ಕುಮಾರೇಗೌಡ, ಜೆಡಿಎಸ್ ಮುಖಂಡರಾದ ಹೊಸಕೋಟೆ ಪುಟ್ಟಣ್ಣ, ಹಳೇಬೀಡು ಕುಳ್ಳೇಗೌಡ, ಎರೆಗೌನಹಳ್ಳಿ ಯೋಗರಾಜ್ ಇದ್ದರು.