ಕನ್ನಡಪ್ರಭ ವಾರ್ತೆ ಗುಬ್ಬಿ
ಶಾಸಕ ಎಸ್ ಆರ್ ಶ್ರೀನಿವಾಸ್ ಮಾತನಾಡಿ, ಬಡವರ ಜೀವನಕ್ಕೆ ಆಧಾರವಾಗಿರುವ ಹೈನುಗಾರಿಕೆಯನ್ನು ಪ್ರತಿಯೊಬ್ಬರು ಅಭಿವೃದ್ಧಿ ಪಡಿಸಬೇಕು. ಎಲ್ಲಾ ಹಾಲು ಉತ್ಪಾದಕರು ಡೈರಿಗೆ ಹಾಲನ್ನು ಹಾಕುವ ಮೂಲಕ ಒಕ್ಕೂಟವನ್ನು ಬೆಳೆಸಲು ಸಹಕಾರ ನೀಡಬೇಕು. ಒಕ್ಕೂಟವು ನಿರಂತರ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮಾತನಾಡಿ, ನಿವೃತ್ತಿ ಹೊಂದಿದ ಕಾರ್ಯದರ್ಶಿಗಳ ನಿವೃತ್ತಿ ವೇತನ 1 ಲಕ್ಷ ಇರುವುದನ್ನ 5 ಲಕ್ಷಕ್ಕೆ ಹೆಚ್ಚಳ ಮಾಡಲು ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗುತ್ತದೆ. ಹಾಲನ್ನು ಡೈರಿಗೆ ಹಾಕುವ ಕುಟುಂಬದವರು ಅನಾರೋಗ್ಯದಿಂದ ಇದ್ದಾರೆ ಅವರಿಗೆ 25,000 ರೂಗಳು, ಸದಸ್ಯರು ಮರಣ ಹೊಂದಿದರೆ 50,000 ರೂಗಳನ್ನು ನೀಡಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಎಸ್ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 85ಕ್ಕೂ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ 1,85,000 ರೂ, 96 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.
ಕಾರ್ಯಕ್ರಮದಲ್ಲಿ ತಿಮ್ಮನಾಯಕ್, ಚಂದ್ರಶೇಖರ್ ಕೇದನೂರಿ, ವೆಂಕಟೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಯುಷಾ ತಾಸೀನ್, ಲಿಯಾಕತ್ ಅಲಿಖಾನ್, ಶಂಕರ್ ನಾಗ್, ಮಹೇಶ್, ರಾಜ್, ಶ್ವೇತಾ, ಸದಸ್ಯರಾದ ಮಹಮ್ಮದ್ ಸಾಧಿಕ್, ಕುಮಾರ್, ಇತರರಿದ್ದರು.