ಕನ್ನಡಪ್ರೇಮ ನವೆಂಬರ್‌ಗೆ ಮಾತ್ರ ಸೀಮಿತವಾಗದಿರಲಿ: ಸಿ.ಜಿ. ಖಾನಾಪುರ

KannadaprabhaNewsNetwork |  
Published : Nov 08, 2025, 02:30 AM IST
(7ಎನ್.ಆರ್.ಡಿ4 ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಪ್ರಾಚಾರ್ಯ ಸಿ.ಜಿ.ಖಾನಾಪೂರವರು ಉದ್ಘಾಟಿಸಿದರು.)  | Kannada Prabha

ಸಾರಾಂಶ

ಭಾಷೆಯ ಬಗ್ಗೆ ನಮಗೆ ಸ್ವಾಭಿಮಾನ ಇರಬೇಕು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗ ಹೆಮ್ಮೆಯ ಸಂಸ್ಥೆ. ಅದು ಸದಾಕಾಲ ಕನ್ನಡ ಭಾಷೆ ಹಾಗೂ ಕನ್ನಡಿಗರ ಏಳಿಗೆಗಾಗಿ ಶ್ರಮಿಸುತ್ತಿದೆ.

ನರಗುಂದ: ಕನ್ನಡಿಗರು ಕೇವಲ ನವೆಂಬರ್ ತಿಂಗಳ ಕನ್ನಡದ ಬಗ್ಗೆ ಪ್ರೇಮ ತಾಳಿದರೆ ಸಾಲದು. ವರ್ಷಪೂರ್ತಿ ಕನ್ನಡವನ್ನು ತಾಯಿಯ ಭಾಷೆಯೆಂದು ಪ್ರೀತಿಸಿದರೆ ಮಾತ್ರ ಕನ್ನಡ ಉಳಿಯಲು ಸಾಧ್ಯವೆಂದು ಪ್ರಾಚಾರ್ಯ ಸಿ.ಜಿ. ಖಾನಾಪುರ ತಿಳಿಸಿದರು.

ತಾಲೂಕಿನ ಬನಹಟ್ಟಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಮಾತೃಭಾಷೆ ಎನ್ನುವುದು ಮಾನವನಿಗೆ ಲಭಿಸಿರುವ ಒಂದು ವಿಶಿಷ್ಟ ಭಾಷೆ ಹೊರತುಪಡಿಸಿ ಅವನ ಬದುಕು ಶೂನ್ಯ. ಭಾಷೆಗೂ ಮಾನವನಿಗೂ ಅವಿನಾಭಾವ ಸಂಬಂಧವಿದೆ ಎಂದರು.

ಭಾಷೆಯ ಬಗ್ಗೆ ನಮಗೆ ಸ್ವಾಭಿಮಾನ ಇರಬೇಕು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗ ಹೆಮ್ಮೆಯ ಸಂಸ್ಥೆ. ಅದು ಸದಾಕಾಲ ಕನ್ನಡ ಭಾಷೆ ಹಾಗೂ ಕನ್ನಡಿಗರ ಏಳಿಗೆಗಾಗಿ ಶ್ರಮಿಸುತ್ತಿದೆ ಎಂದರು.

ಪ್ರೊ. ರಮೇಶ ಐನಾಪೂರ ಮಾತನಾಡಿ, ಹರಿದುಹಂಚಿ ಹೋಗಿದ್ದ ಕರ್ನಾಟಕವನ್ನು ಒಂದುಗೂಡಿಸಲು ಕರ್ನಾಟಕ ಹಲವಾರು ಮಹನೀಯರು ಅವಿರತವಾಗಿ ಶ್ರಮಿಸಿದ್ದಾರೆ. ಅವರ ಹೋರಾಟದ ಫಲವಾಗಿ ಕನ್ನಡಿಗರಾದ ನಾವೆಲ್ಲರೂ ಒಂದಾಗಿ ಬಾಳುವಂತಾಗಿದೆ ಎಂದರು.

ಕಸಾಪ ಅಧ್ಯಕ್ಷ ಪ್ರೊ. ಬಿ.ಸಿ. ಹನುಮಂತಗೌಡ್ರ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಯ ಕೂಗು ಕೇಳಿ ಬರುತ್ತಿದೆ. ಅಧಿಕಾರ ಲಾಲಸೆಯ ಪಟ್ಟಭದ್ರ ಹಿತಾಸಕ್ತಿಯ ಈ ಗುಂಪಿಗೆ ನಮ್ಮ ಬೆಂಬಲವಿಲ್ಲ ಎಂದರು.

ಎಸ್.ವೈ. ಪಾಟೀಲ, ರೂಪಾ ಪಾಟೀಲ, ರಮೇಶ ಮೆಣಸಗಿ ಇದ್ದರು. ಬಸಮ್ಮ ಪಾಟೀಲ ಸ್ವಾಗತಿಸಿದರು. ಅಂಜನಾದೇವಿ ಓಜನಳ್ಳಿ ನಿರೂಪಿಸಿದರು. ಬಿ.ಆರ್. ಕುರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ಫೋಸಿಸ್ ಮಾರಿದ್ದ ಜಮೀನು ನೋಂದಣಿ ಮಾಡಿಕೊಟ್ಟ ಸಬ್ ರಿಜಿಸ್ಟ್ರಾರ್ ಅಮಾನತು
ಬಳ್ಳಾರಿ ಗನ್‌ಮ್ಯಾನ್‌ ಸೇರಿ ಕೈ, ಬಿಜೆಪಿಯ 26 ಜನ ಸೆರೆ