ಯುವ ವಕೀಲರಿಗೆ ಕೆಳ ಹಂತದ ನ್ಯಾಯಾಲಯ ಮೂಲ ಆಧಾರ

KannadaprabhaNewsNetwork |  
Published : Dec 07, 2024, 12:31 AM IST
ಕಾರ್ಯಕ್ರಮವನ್ನು ನ್ಯಾ.ಶ್ರೀನಿವಾಸ ಉದ್ಘಾಟಿಸಿದರು. | Kannada Prabha

ಸಾರಾಂಶ

ಇತ್ತೀಚಿಗೆ ಯುವ ವಕೀಲರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ನೇರವಾಗಿ ಕಾರ್ಯನಿರ್ವಹಿಸಲು ಮುಂದಾಗುತ್ತಿದ್ದಾರೆ

ಗದಗ: ಯುವ ವಕೀಲರಿಗೆ ಕೆಳ ಹಂತದ ನ್ಯಾಯಾಲಯ ಮೂಲ ಆಧಾರ ಎಂದು ನ್ಯಾ. ಶ್ರೀನಿವಾಸ ಹೇಳಿದರು.

ನಗರದ ಕೆ.ಎಲ್.ಇ ಸಂಸ್ಥೆಯ ಎಸ್.ಎ ಮಾನ್ವಿ ಕಾನೂನು ಮಹಾವಿದ್ಯಾಲಯ ಹಾಗೂ ಕೆ.ಎಲ್.ಇ. ಲಾ ಅಕಾಡೆಮಿ ವತಿಯಿಂದ ಆಯೋಜಿಸಿದ್ದ 3 ದಿನದ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿಗೆ ಯುವ ವಕೀಲರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ನೇರವಾಗಿ ಕಾರ್ಯನಿರ್ವಹಿಸಲು ಮುಂದಾಗುತ್ತಿದ್ದಾರೆ. ಆದರೆ, ಮೇಲುಹಂತದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಯಾವ ಆಧಾರ ಮತ್ತು ಯಾವ ಕಾನೂನು ಅಡಿಯಲ್ಲಿ ಮಂಡನೆ ಮಾಡಬೇಕು ಎಂಬುದನ್ನು ಅರಿಯಲು ಸ್ಪಲ್ಪ ಕಷ್ಟವಾಗುತ್ತದೆ. ಆಗ ಸಮಸ್ಯೆ ಎದುರಿಸಬೇಕಾದ ಪ್ರಸಂಗ ಒದಗಿ ಬರುತ್ತದೆ. ತಾಲೂಕು, ಜಿಲ್ಲಾ ಮತ್ತು ಆಡಳಿತಾತ್ಮಕ ನ್ಯಾಯಾಲಯಗಳು ಪ್ರಕರಣಗಳ ಮೂಲದ ಜತೆಗೆ, ಪ್ರಕರಣವನ್ನು ಯಾವ ಹಂತಕ್ಕೆ ತಲುಪಿಸಬೇಕೆಂಬುದನ್ನು ಚೆನ್ನಾಗಿ ಕಲಿಸುತ್ತವೆ. ಯುವ ವಕೀಲರು ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ನ್ಯಾಯಾಲಯದ ಮುಂದೆ ಹಾಜರಪಡಿಸಬೇಕಾದರೆ ಪ್ರಕರಣದ ಮೂಲವನ್ನು ಮತ್ತು ಸತ್ಯಾಸತ್ಯತೆಯನ್ನು ಅರ್ಥೈಸಿಕೊಳ್ಳುವುದು ಅಗತ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ವಿದ್ಯಾರ್ಥಿ ಹಂತದಲ್ಲಿಯೇ ಕಾಲೇಜುಗಳಲ್ಲಿ ನಡೆಯುವ ಅಣಕು ನ್ಯಾಯಾಲಯ, ಅಣಕು ರಾಜಿ ಸಂಧಾನ, ಚರ್ಚಾ ಸ್ಪರ್ಧೆಗಳಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮನ್ನು ತಾವು ಸಮರ್ಥರನ್ನಾಗಿ ಮಾಡಿಕೊಂಡು ನ್ಯಾಯಾಲಯದ ಮುಂದೆ ಹಾಜರಾದಾಗ ಪ್ರಕರಣಗಳನ್ನು ಪ್ರಬುದ್ಧರಾಗಿ ಎದುರಿಸಲು ಸಾಧ್ಯವಾಗುತ್ತದೆ. ವಿವಿಧ ಕ್ಷೇತ್ರದಲ್ಲಿ ನಿರಂತರವಾಗಿ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ನಾವು ಸಮಾಜದಲ್ಲಿ ಹೆಸರು ಮತ್ತು ಹಣ ಗಳಿಕೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಟಿ.ಜೆ. ಶಿವಶಂಕ್ರಗೌಡ ಮಾತನಾಡಿ, ಸಂವಿಧಾನಕ್ಕೆ ಅಗೌರವ ತೋರಿಸುತ್ತಿರುವುದು ವಿದ್ಯಾವಂತರಾಗಿದ್ದಾರೆ. ಇದರಿಂದ ಸಂವಿಧಾನದ ಗೌರವಕ್ಕೆ ಧಕ್ಕೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಇಲ್ಲಿ ನಡೆಯುವ ಅಣಕು ನ್ಯಾಯಾಲಯಗಳಲ್ಲಿ ಸಂವಿಧಾನದ ಮೂಲ ಯಾವುದು ಎಂಬುದನ್ನು ಅರಿತುಕೊಂಡು, ಸಮಾಜದಲ್ಲಿ ಸಂವಿಧಾನದ ಗೌರವ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ಕರ್ನಾಟಕ ಹೈಕೋಟ್ ನ್ಯಾಯಮೂರ್ತಿ ಉಮೇಶ ಮಂಜುನಾಥ ಭಟ್ಟ ಅಡಿಗ ಮಾತನಾಡಿ, ವಕೀಲ ವೃತ್ತಿಯಲ್ಲಿ ದಾವೆಗೆ ಸೂಕ್ತವಾಗಿರುವುದು ವಾದಪತ್ರವಾಗಿದೆ. ಆದ್ದರಿಂದ ಯುವ ವಕೀಲರು ಮತ್ತು ಕಾನೂನು ವಿದ್ಯಾರ್ಥಿಗಳು ವಾದ, ಪ್ರತಿವಾದ ಪತ್ರಗಳನ್ನು ಚೆನ್ನಾಗಿ ಬರೆಯಬೇಕು. ಕಾನೂನು ಕೇವಲ ಒಂದು ಪುಸ್ತಕ ಅಲ್ಲ, ಅದು ಸಮುದ್ರವಿದ್ದಂತೆ. ಹಾಗಾಗಿ ವಿದ್ಯಾರ್ಥಿಗಳು ಕಾನೂನುಗಳನ್ನು ಅರ್ಥೈಸಿಕೊಳ್ಳುವುದು ತುಂಬಾ ಅಗತ್ಯವಾಗಿದೆ ಎಂದರು.

ಈ ವೇಳೆ ಬೆಂಗಳೂರು ಕೆಎಲ್‌ಇ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಜೆ.ಎಂ. ಮಲ್ಲಿಕಾರ್ಜುನಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶ್ರೀಶೈಲಪ್ಪ ಮೆಟಗುಡ್ಡ, ಎಸ್.ಎ. ಮಾನ್ವಿ, ಸಿ. ಬಸವರಾಜ ಇದ್ದರು. ಪ್ರಾಚಾರ್ಯ ಜೈಹನುಮಾನ ಎಚ್.ಕೆ. ಸ್ವಾಗತಿಸಿದರು. ಉಪನ್ಯಾಸಕ ಡಾ. ವಿಜಯ ಮುರದಂಡೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ