ದೊಡ್ಡಬಳ್ಳಾಪುರ: ವರ್ಷದ ಮೊದಲ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವು ದೇವಾಲಯಗಳು ಮಂಗಳವಾರ ಮಧ್ಯಾಹ್ನದ ನಂತರ ಬಾಗಿಲು ಮುಚ್ಚಲ್ಪಟ್ಟಿದ್ದವು.
ಗ್ರಹಣ ಮೋಕ್ಷದ ಬಳಿಕ ರಾತ್ರಿ 7.30ಕ್ಕೆ ದೇವಾಲಯ ಶುದ್ದೀಕರಣ ಬಳಿಕ, ಗರ್ಭಗುಡಿಯನ್ನು ತೆರೆಯಲಾಯಿತು. ಬಳಿಕ, ದೇವರಿಗೆ ವಿಶೇಷ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಲಾಯಿತು. ನೆರೆದಿದ್ದ ಸಹಸ್ರಾರು ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದರು.
ವಿವಿಧ ದೇಗುಲಗಳಲ್ಲಿ ಗ್ರಹಣ ಆಚರಣೆ:ಇತಿಹಾಸಪ್ರಸಿದ್ದ ತೂಬಗೆರೆ ವೆಂಕಟರಮಣಸ್ವಾಮಿ ದೇವಾಲಯ, ದೊಡ್ಡಬಳ್ಳಾಪುರದ ಶ್ರೀನರಸಿಂಹಸ್ವಾಮಿ ದೇವಾಲಯಗಳಲ್ಲಿ ಗ್ರಹಣಕಾಲಕ್ಕೂ ಮುನ್ನ ವಾರ್ಷಿಕ ಬ್ರಹ್ಮರಥೋತ್ಸವ ನೆರವೇರಿಸಲಾಯಿತು. ಬಳಿಕ ದೇವಾಲಯವನ್ನು ಮುಚ್ಚಲಾಯಿತು. ಬೆಳಗ್ಗಿನಿಂದ ವಿವಿಧ ಪೂಜಾ ವಿಧಿಗಳು ನಡೆದವು. ಗ್ರಹಣ ಮೋಕ್ಷದ ಬಳಿಕ ರಾತ್ರಿ ವಿಶೇಷ ಪೂಜೆಯೊಂದಿಗೆ ದೇವಾಲಯ ಬಾಗಿಲು ತೆರೆದು ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.
3ಕೆಡಿಬಿಪಿ8-
ಚಂದ್ರಗ್ರಹಣ ಹಿನ್ನಲೆ ದೊಡ್ಡಬಳ್ಳಾಪುರ ತಾಲೂಕು ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯವನ್ನು ಮಂಗಳವಾರ ಮಧ್ಯಾಹ್ನ ಮುಚ್ಚಲಾಗಿತ್ತು.--
3ಕೆಡಿಬಿಪಿ9-ಗ್ರಹಣ ಹಿನ್ನಲೆ ಘಾಟಿ ದೇವಾಲಯ ಮುಖ್ಯದ್ವಾರಕ್ಕೆ ಬೀಗ.