ಮಾಬುಕಳ: ಸಾರ್ವಜನಿಕ ಗಣೇಶೋತ್ಸವ, ಸಾಧಕರಿಗೆ ಸನ್ಮಾನ

KannadaprabhaNewsNetwork |  
Published : Aug 30, 2025, 01:01 AM IST
28ಮಾಬುಕಳ | Kannada Prabha

ಸಾರಾಂಶ

ದೂಳಂಗಡಿ ಶಾಲಾ ವಠಾರದಲ್ಲಿ ೧೬ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.

ಕೋಟ: ಇಲ್ಲಿನ ಸಾಸ್ತಾನದ ದೂಳಂಗಡಿ ಶಾಲಾ ವಠಾರದಲ್ಲಿ ೧೬ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಆನಂದ ಗಾಣಿಗ ವಹಿಸಿದ್ದರು.ಸಮಾಜಸೇವೆಯಲ್ಲಿ ವಿಜಯ ಪೂಜಾರಿ ಬಾಳ್ಕುದ್ರು, ರಾಮ ಕರ್ಕೇರ ದಂಡೆಬೆಟ್ಟು, ಶೈಕ್ಷಣಿಕ ಕ್ಷೇತ್ರದಲ್ಲಿ ವೀಣಾ ಶೆಟ್ಟಿ ಹಾಗೂ ಸ್ಥಳೀಯ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.ಬಾರಕೂರು ಮಂಜುನಾಥ್ ಭಟ್ ನಾಯರಬೆಟ್ಟು ಅವರು ಧಾರ್ಮಿಕ ಪ್ರವಚನಗೈದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಪ್ರಣವ್ ಆಸ್ಪತ್ರೆಯ ಮುಖ್ಯಸ್ಥ ಡಾ.ಪ್ರವೀಣ್ ಕುಮಾರ್, ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಸುರೇಶ್ ಅಡಿಗ, ಉದ್ಯಮಿ ಕಿರಣ್ ಮಡಿವಾಳ, ಕೆ.ಪಿ.ಟಿ.ಸಿ.ಎಲ್. ಕಾರ್ಯವಾಹಕ ಇಂಜಿನಿಯರ್ ಶ್ರೀನಿವಾಸ್ ಅಲ್ಸೆಬೆಟ್ಟು, ಸಮಿತಿಯ ನಿಕಟಪೂರ್ವ ಅಧ್ಯಕ್ಷ ಶಿವರಾಮ ಶ್ರೀಯಾನ್, ದೂಳಂಗಡಿ ಶಾಲಾಮುಖ್ಯ ಶಿಕ್ಷಕಿ ಪ್ರಸಿಲ್ಲಾ ನೊರೋನ್ಹಾ, ಐರೋಡಿ ಪಂಚಾಯತ್ ಸದಸ್ಯ ಶೇಖರ್ ಪೂಜಾರಿ, ಸಮಿತಿ ಕಾರ್ಯದರ್ಶಿ ಗಿರೀಶ್ ಮಯ್ಯ ಉಪಸ್ಥಿತರಿದ್ದರು.ಸಮಿತಿ ಗೌರವಾಧ್ಯಕ್ಷ ಶ್ರೀಪತಿ ಅಧಿಕಾರಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಮಿತಿಯ ಪ್ರಕಾಶ್ ಕುಂದರ್ ನಿರೂಪಿಸಿ, ಕೋಶಾಧಿಕಾರಿ ಶೇಖರ್ ಮೆಂಡನ್ ವಂದಿಸಿದರು. ನಂತರ ಸಂಗೀತ ರಸಮಂಜರಿ, ಪ್ರಸಿದ್ಧ ನೃತ್ಯ ತಂಡದಿಂದ ನೃತ್ಯ ಸಿಂಚನ, ಸುಪ್ರಸಿದ್ಧ ಗಾಯಕರಿಂದ ಗಾಯನ ಕಾರ್ಯಕ್ರಮ ಜರಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ