ಮಾಚಿದೇವ ಸ್ವಾಮೀಜಿಯವರ ಪ್ರಯತ್ನಕ್ಕೆ ಸಹಕಾರ ಅಗತ್ಯ

KannadaprabhaNewsNetwork |  
Published : Feb 03, 2026, 01:15 AM IST
ಪೋಟೋ, 2ಎಚ್‌ಎಸ್‌ಡಿ1: ಹೊಸದುರ್ಗದಲ್ಲಿ ನಡೆದ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಗಾಟಿಸಿದರು. | Kannada Prabha

ಸಾರಾಂಶ

ಹೊಸದುರ್ಗದಲ್ಲಿ ನಡೆದ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಗಾಟಿಸಿದರು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಸಮಾಜ ಸಂಘಟನೆಗೆ ಮುಂದಾಗಿರುವ ಮಡಿವಾಳ ಮಾಚಿದೇವ ಸ್ವಾಮೀಜಿಯವರ ಪ್ರಯತ್ನಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿ ಬೇಕಾಗಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ಪಟ್ಟಣದ ಅಶೋಕ ರಂಗಮಂದಿರದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ವೀರ ಮಡಿವಾಳ ಮಾಚಿದೇವ ಸಂಘದ ಸಹಯೋಗದೊಂದಿಗೆ ಭಾನುವಾರ ನಡೆದ ವೀರ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

12ನೇ ಶತಮಾನದ ವಚನ ಚಳುವಳಿಯಲ್ಲಿ ಬಸವಣ್ಣ ಹಾಗೂ ಇತರ ಶರಣರೊಂದಿಗೆ ಮಾಚಿದೇವರು ಮುಂಚೂಣಿಯಲ್ಲಿದ್ದರು. ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಚಿದೇವರ ಜಯಂತಿಯನ್ನು ಆಚರಣೆಗೆ ತಂದರು. ಇಂದು ಸಮುದಾಯದ ನಿಗಮವು ಕೂಡ ಆಗಿದ್ದು, ಸಮಾಜದ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಮಾಡುತ್ತಿದೆ. ಮಡಿವಾಳ ಸಮುದಾಯದ ಅನೇಕ ಬೇಡಿಕೆಗಳನ್ನು ಮೇ-ಜೂನ್ ತಿಂಗಳಲ್ಲಿ ಸಿಗುವ ಅನುದಾನದಲ್ಲಿ ಬೇಡಿಕೆಗಳನ್ನ ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ತಹಸೀಲ್ದಾರ್ ತಿರುಪತಿ ಪಾಟೀಲ್ ಮಾತನಾಡಿ, ಯುವಜನತೆ ಮಹಾತ್ಮರ ವಚನಗಳನ್ನು ಓದಿ ಅರ್ಥ ಮಾಡಿಕೊಳ್ಳಬೇಕಿದೆ. ವಚನಗಳ ಓದಿನಿಂದ ಪರಿವರ್ತನೆಗೊಳ್ಳಬಹುದು. ದೇಶದಲ್ಲಿರುವ ಯಾವುದೇ ವೃತ್ತಿಯೂ ಮೇಲು ಕೀಳು ಎಂಬುದಿಲ್ಲ ಅರಸುತನ ಮೇಲಲ್ಲ, ಅಗಸತನ ಕೀಳಲ್ಲ. ಸಮಸಮಾಜದ ಕಲ್ಪನೆಯನ್ನು ಮಡಿವಾಳ ಮಾಚಿದೇವರು ಕೊಟ್ಟಿದ್ದಾರೆ. ವೃತ್ತಿಯಲ್ಲಿ ಕೈಲಾಸವನ್ನ ಕಾಣಬೇಕೆಂದು ಮಾರ್ಮಿಕವಾಗಿ ಹೇಳಿದ್ದಾರೆ. ಇವತ್ತಿನ ಪ್ರಸ್ತುತ ಸಮಾಜಕ್ಕೆ ಮಹನೀಯರ ವಚನಾದರ್ಶನಗಳು ಅವಶ್ಯಕತೆಯಿದೆ. ಸಾಮಾಜಿಕ ಜಾಲತಾಣಗಳು ಇಂದು ನಮ್ಮ ಮಕ್ಕಳ ಬುದ್ಧಿಯನ್ನ ಆಳುತ್ತಿವೆ. ಬುದ್ಧಿಯನ್ನ ಛಿದ್ರಗೊಳಿಸುತ್ತಿವೆ. ಆತ್ಮವಿಶ್ವಾಸದಿಂದ ಬದುಕುವುದು ಹೇಗೆ ಎಂದು ಹೇಳಿಕೊಟ್ಟು ಮಕ್ಕಳನ್ನ ಗಟ್ಟಿಗೊಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಸೇವೆ ಸಲ್ಲಿಸಿದ ಮಡಿವಾಳ ಸಮುದಾಯದ ನಿವೃತ್ತ ನೌಕರರಾದ ಅಣ್ಣಯ್ಯ, ಟಿ.ಜಯಣ್ಣ, ಆರ್.ಜಯಣ್ಣ, ಚಂದ್ರಪ್ಪ, ಲೋಕೇಶಪ್ಪ, ಮಂಜುನಾಥ್ ಮತ್ತು ತಿಪ್ಪೇಸ್ವಾಮಿ ಇವರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಲೋಕೇಶ್ವರಪ್ಪ, ಕಾರ್ಯದರ್ಶಿ ರಮೇಶ್, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ತಿಪ್ಪೇಸ್ವಾಮಿ, ಕುರುಬ ಸಮಾಜದ ಅಧ್ಯಕ್ಷ ನಾಗೇನಹಳ್ಳಿ ಮಂಜುನಾಥ್, ರಾಜ್ಯ ವೀರ ಮಡಿವಾಳ ಮಾಚಿದೇವ ಯುವಸೇನಾ ಪಡೆಯ ಕಾರ್ಯಾಧ್ಯಕ್ಷ ನಾಗತಿಹಳ್ಳಿ ಮಂಜುನಾಥ್, ಮುಖಂಡರಾದ ಗೋಪಿಕೃಷ್ಣ, ರಾಮ ಕೃಷ್ಣಪ್ಪ, ಹೆಚ್.ನಾಗರಾಜಯ್ಯ, ಮಹಮ್ಮದ್ ಇಸ್ಮಾಯಿಲ್, ಶಿವರುದ್ರಪ್ಪ, ರಾಮಣ್ಣ ಮತ್ತು ಮಲ್ಲೇಶಪ್ಪ ಸೇರಿದಂತೆ ಸಮುದಾಯದ ಬಂಧುಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ