ಚಂದ್ರು ಕೊಂಚಿಗೇರಿ
ವಿಜಯನಗರ ಅರಸರ ಕಾಲದ ಶ್ರೀಕೃಷ್ಣದೇವರಾಯನೂ ಕುಸ್ತಿಪಟು ಆಗಿದ್ದರು. ಇದರಿಂದ ಈ ಭಾಗದಲ್ಲಿ ಕುಸ್ತಿ ಪಂದ್ಯ ಹೆಚ್ಚು ಪ್ರಚಲಿತವಿದೆ. ಪ್ರತಿಬಾರಿ ಹಂಪಿ ಉತ್ಸವದಲ್ಲಿ ಕುಸ್ತಿ ಪಂದ್ಯಾಟಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ.
ಹಂಪಿ ಕೇಸರಿ, ಹಂಪಿ ಕಂಠೀರವ, ಹಂಪಿ ಕಿಶೋರಿ ಎಂಬ ಮೂರು ವಿಭಾಗಗಳಲ್ಲಿ ಕುಸ್ತಿಯನ್ನು ಆಯೋಜಿಸಲಾಗಿತ್ತು, ಪ್ರತಿ ಉತ್ಸವದಲ್ಲಿ ಹಂಪಿ ಕೇಸರಿ, ಹಂಪಿ ಕಿಶೋರಿ ಎಂಬ 2 ವಿಭಾಗಗಳು ಮಾತ್ರ ಆಯೋಜಿಸಲಾಗುತ್ತಿತ್ತು, ಆದರೆ ಈ ಬಾರಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಹೆಚ್ಚು ಕುಸ್ತಿಗೆ ಆದ್ಯತೆ ನೀಡುವ ಮೂಲಕ ರಾಜ್ಯ ಮಟ್ಟದ ಕುಸ್ತಿಗೆ ಹಂಪಿ ಕಂಠೀರವ ಎಂಬ ಹೆಸರಿನೊಂದಿಗೆ ಮತ್ತೊಂದು ವಿಭಾಗವನ್ನು ಆರಂಭಿಸಿದ್ದಾರೆ.ಕುಸ್ತಿಪಟುಗಳು ವಿಭಿನ್ನ ಪಟ್ಟುಗಳನ್ನು ಹಾಕುತ್ತಿದ್ದಂತೆ ನೆರೆದಿದ್ದ ಜನ ಸೀಳ್ಳೆ ಕೇಕೆಗಳನ್ನು ಹಾಕಿ ಚೆಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.
ನೆತ್ತಿಯ ಮೇಲೆ ರಣಬಿಸಿಲು, ಅಖಾಡದಲ್ಲಿ ಕುಸ್ತಿ ಪಂದ್ಯಾಟದ ಬಿಸಿ ನೆರೆದಿದ್ದ ಸಮೂಹದವರ ಬೆವರಿಳಿಸುತ್ತಿದ್ದರೆ, ಇತ್ತ ಪೈಲ್ವಾನರು ಸಹ ತಮ್ಮ ಎದುರಾಳಿಗಳ ಬೆವರಿಳಿಸುವಲ್ಲಿ ನಿರತರಾಗಿದ್ದ ದೃಶ್ಯ ಎಂಥವರನ್ನೂ ಕುತೂಹಲದಿಂದ ನಿಂತು ವೀಕ್ಷಿಸುವಂತೆ ಮಾಡಿತ್ತು.
ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಕುಸ್ತಿ ಪಟುಗಳು ಭಾಗವಹಿಸಿದ್ದರು. ಈ ಬಾರಿ 15ಕ್ಕೂ ಹೆಚ್ಚು ಮಹಿಳಾ ಕುಸ್ತಿಪಟುಗಳು ಸ್ಪರ್ಧಿಸಿದ್ದು ವಿಶೇಷವಾಗಿತ್ತು.
ಗದುಗಿನ ತೇಜಸ್ವಿನಿ- ಗದುಗಿನ ಶ್ರೀದೇವಿ ಮಡಿವಾಳ ಮಧ್ಯೆ ನಡೆದ ಪ್ರಾರಂಭದ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ತೇಜಸ್ವಿನಿ ವಿಜಯಶಾಲಿಯಾದರು. ವಿವಿಧೆಡೆಗಳಿಂದ ಆಗಮಿಸಿದ್ದ ಸಾರ್ವಜನಿಕರು ಕುತೂಹಲದಿಂದ ಕುಸ್ತಿ ಪಂದ್ಯಗಳನ್ನು ವೀಕ್ಷಿಸಿದರು.
ಹಂಪಿ ಕೇಸರಿ: ಮುಸ್ಲಿಕ್ ಆಲಂ ರಾಜಾಸಾಬ್- ಬೆಳಗಾವಿ
ಹಂಪಿ ಕಿಶೋರ: ಮಂಜು ಗೊರವರ, ಹರಪನಹಳ್ಳಿ
ಮಹಿಳೆಯರ ಕುಸ್ತಿ ಸ್ಪರ್ಧೆ ಫಲಿತಾಂಶ
ಹಂಪಿ ಕೇಸರಿ- ತೇಜಸ್ವಿನಿ ಬಿಂಗಿ, ಗದಗಹಂಪಿ ಕಂಠೀರವ- ಭುವನೇಶ್ವರಿ ಕೋಳಿವಾಡ, ಗದಗ
ಹಂಪಿ ಕಿಶೋರಿ- ವೈಷ್ಣವಿ ಇಮ್ಮಡಿಯವರ, ಗದಗಹಂಪಿ ಕುಮಾರಿ- ಭುವನೇಶ್ವರಿ ಕೆ.ಎಸ್., ಶಿವಮೊಗ್ಗ