ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಗ್ರಾ.ಪಂ. ಅಧ್ಯಕ್ಷ ಸೋಮಣ್ಣ ಮಾತನಾಡಿ, ಕಸ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಹೊಸಬಡಾವಣೆಯ ಕಸ ವಿಲೇವಾರಿ ಘಟಕದ ಸಮಸ್ಯೆಗೆ ಅತ್ಯಾಧುನಿಕ ಉಪಕರಣ ಶೀಘ್ರದಲ್ಲೇ ಬರಲಿದೆ. ರಸ್ತೆಯ ಬದಿಯಲ್ಲಿ ಕಸ ಎಸೆಯುವುದನ್ನು ಗ್ರಾಮಸ್ಥರು ಕೈ ಬಿಡಬೇಕು. ಗ್ರಾಮ ಪಂಚಾಯಿತಿ ಟ್ರ್ಯಾಕ್ಟರ್ ಬರುವ ಸಮಯದಲ್ಲಿ ಒಣ ಕಸವನ್ನು ಕಡ್ಡಾಯವಾಗಿ ಹಾಕಬೇಕು. ಮಾರುಕಟ್ಟೆ ಆವರಣದ ಶುಚಿತ್ವವನ್ನು ಕಾಪಾಡಲಾಗಿದೆ. ಪಂಚಾಯಿತಿ ಅಭಿವೃದ್ಧಿ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಹೇಳಿದರು.ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ಗೆ ರೋಗಿಗಳು ಡಿಸೇಲ್ ಹಾಕಬೇಕಾ? ಪಶುವೈದ್ಯ ಇಲಾಖೆಯ ವೈದ್ಯರು ರಾಸುಗಳ ಚಿಕಿತ್ಸೆಗೆ ಬಂದಾಗ ಲಂಚದ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದಾರೆ. ಗ್ರಾಮ ಪಂಚಾಯಿತಿಯವರು ಆರೋಗ್ಯ ಕೇಂದ್ರದಲ್ಲಿ ಮಾತ್ರೆ ಜೌಷಧಿ ಸಿಗದಿರುವ ಬಗ್ಗೆ ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆಯ ಅಧಿಕಾರಿಯವರನ್ನು ಕರೆಯಿಸಿ ಜನಸಾಮಾನ್ಯರಿಗೆ ಆರೋಗ್ಯ ಚಿಕಿತ್ಸೆ ಲಭಿಸದೆ ಇರುವ ಬಗ್ಗೆ ಚರ್ಚೆ ನಡೆಸಬೇಕು ಎಂದು ಕಂಠಿ, ಭವಿನ್, ನಾಸೀರ್, ಸಚ್ಚಿಕಾಳಪ್ಪ ಹಕ್ಕೋತ್ತಾಯ ಮಂಡಿಸಿದರು. ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟದಿದ್ದರೆ ಸಾರ್ವಜನಿಕರು ರಸ್ತೆಗೆ ಬಂದು ಹೋರಾಡಲಿದ್ದಾರೆ. ಅಸ್ಸಾಂ ಕಾರ್ಮಿಕರಿಗೆ ಕರ್ನಾಟಕ ಆಧಾರ್ ಕಾರ್ಡು ನಿರ್ಮಿಸಿಕೊಡುವವರು ಸಂತೆಯಲ್ಲಿ ಅಸ್ಸಾಂ ಕಾರ್ಮಿಕರು ಅಂಗಡಿ ಹಾಕುವುದನ್ನು ಗ್ರಾ.ಪಂ. ಹಾಗೂ ತೋಟದ ಮಾಲೀಕರು ಅವಕಾಶ ಕಲ್ಪಿಸಿದರೆ ಕೊಡಗಿನಲ್ಲಿ ಭಾರಿ ಅನಾಹುತ ಸಂಭವಿಸಲಿದೆ ಎಂದು ಮಾಜಿ ಸೈನಿಕ ತಂಬುಕುತ್ತೀರ ಗಪ್ಪು ಆತಂಕ ವ್ಯಕ್ತಪಡಿಸಿದರು. ಸಿಸಿ ಕ್ಯಾಮರವನ್ನು ಅಳವಡಿಸಲಾಗುವುದು:
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ. ರವಿ ಕೃಷ್ಣನ್ ನಾಯರ್ ಮಾತನಾಡಿ, ಜಂಬೂರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯ ಕಸವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲಾಗುವುದು. 3 ಸಿಸಿ ಕ್ಯಾಮರವನ್ನು ಅಳವಡಿಸಲಾಗುವುದು. ಈಗಾಗಲೇ ಕಸ ಘಟಕದಲ್ಲಿದ್ದ 500 ಲೋಡ್ ಕಸವನ್ನು ತೆರವುಗೊಳಿಸುವ ಕಾರ್ಯಪ್ರಗತಿಯಲ್ಲಿದೆ. ಬೀದಿನಾಯಿ ಹಾವಳಿ ಕುರಿತು ಜಿಲ್ಲಾಡಳಿತ ಸುಪ್ರಿಂಕೋರ್ಟಿನ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯಿತಿಯೂ ಕೆಲವು ಸೂಚನೆಗಳು ಜಿಲ್ಲಾಡಳಿತದಿಂದ ಬಂದಿದ್ದು ಹಂತ ಹಂತವಾಗಿ ಬೀದಿನಾಯಿಗಳ ಹಾವಳಿಯನ್ನು ತಡೆಗಟ್ಟಲಾಗುವುದು. ನೀರಿನ ಟ್ಯಾಂಕರ್ ಕಾರ್ಯ ಮುಂದುವರೆದಿದ್ದು, ಗ್ರಾಮ ಸ್ವಚ್ಛತೆ ಆದ್ಯತೆ ಕೆಲಸ ಕಾರ್ಯ ಮುಂದುವರೆದಿದೆ ಎಂದು ಹೇಳಿದರು.ಮಾದಾಪುರ ಸರ್ಕಾರಿ ಪ್ರೌಢಶಾಲೆಯ ಮೈದಾನದ ಒತ್ತಿನಲ್ಲಿರುವ ಸಭಾಂಗಣದಲ್ಲಿ ರಾತ್ರಿ ವೇಳೆ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಶಾಲೆಗೆ ಸೂಕ್ತ ಬೇಲಿ ವ್ಯವಸ್ಥೆ ಖಾಲಿ ಜಾಗದಲ್ಲಿ ಮರ ಗಿಡಗಳನ್ನು ನೆಟ್ಟು ಬೆಳೆಸುವ ಕೆಲಸ ಸಂಬಂಧಿಸಿದ ಇಲಾಖೆಯಿಂದ ಆಗಬೇಕಿದೆ. ಅಕ್ರಮ ಚಟುವಟಿಕೆಗೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಶಾಲೆಯ ಮುಖ್ಯಶಿಕ್ಷಕ ಭರತ್ ಸಭೆಗೆ ತಿಳಿಸಿದರು. ಕುಡಿಯುವ ನೀರು ನೈರ್ಮಲ್ಯಕರಣ ಸಹಾಯಕ ಅಭಿಯಂತರ ವೀರೇಂದ್ರಕುಮಾರ್, ಪಶುವೈದ್ಯ ಇಲಾಖೆಯ ಡಾ.ಅಮರ್, ಮಕ್ಕಳ ಕಲ್ಯಾಣ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರಿ, ಚೆಸ್ಕಾಂ ಕಿರಿಯ ಅಭಿಯಂತರ ನಿರಂಜನ್, ಕಂದಾಯ ಗ್ರಾಮಲೆಕ್ಕಾಧಿಕಾರಿ ದೀಪಿಕಾ, ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದರ್ಶನ್, ತಾಲೂಕು ಪಂಚಾಯಿತಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಧಿಕಾರಿ ಅರುಣ್ಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ಪಿ.ಎಲ್.ಶಿಥಲ್, ವಲಯ ಅರಣ್ಯಾಧಿಕಾರಿ ಉಲ್ಲಾಸ್, ಎ.ಎಸ್.ಐ ಮಂಜುನಾಥ್, ತೋಟಗಾರಿಕ ಇಲಾಖೆಗಳಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.ನೋಡಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ವೀರಣ್ಣ, ಗ್ರಾ.ಪಂ.ಉಪಾಧ್ಯಕ್ಷ ಸುರೇಶ್ಬಾವೆ, ಸದಸ್ಯರಾದ ಕೆ.ಎ.ಲತೀಫ್, ಪಿ.ಡಿ.ಅಂತೋಣಿ, ಕೆ.ಸಿ.ಶೀಲಾ, ಮಾನಸ, ನಿರೂಪ, ಮನುಬಿದ್ದಪ್ಪ, ಗಿರೀಶ ಹಾಗೂ ಲೆಕ್ಕಾಧಿಕಾರಿ ಅನಿತಾ ಇದ್ದರು.