ಹುಬ್ಬಳ್ಳಿ:
ಪೌರಕಾರ್ಮಿಕರ ಸೇವೆ ಎಲ್ಲರೂ ಮೆಚ್ಚುವಂತಹದ್ದು. ಅವರು ಒಂದು ದಿನ ನಗರ ಸ್ವಚ್ಛಗೊಳಿಸದೇ ಇದ್ದರೆ ನಗರದ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಂತಹ ಪೌರಕಾರ್ಮಿಕರು ತಮಗೆ ನ್ಯಾಯ ನೀಡುವಂತೆ 14 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಪಾಲಿಕೆ ಆಯುಕ್ತರಾಗಲಿ ಸಮಸ್ಯೆ ಆಲಿಸದೆ ಇರುವುದು ನೋವಿನ ಸಂಗತಿ ಎಂದರು.
ಸಮಸ್ಯೆ ಪರಿಹಾರ ಆಗಬೇಕಾದಲ್ಲಿ ಇನ್ನೂ ದೊಡ್ಡಮಟ್ಟದ ಹೋರಾಟದ ಅನಿವಾರ್ಯತೆಯಿದೆ. ಈ ಕೂಡಲೇ ಸಮಾಜದ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಆರ್.ಬಿ. ತಿಮ್ಮಾಪುರ ಅವರನ್ನು ಭೇಟಿಯಾಗಿ ಸಮಸ್ಯೆ ಕುರಿತು ಮನವರಿಕೆ ಮಾಡಿ ಧರಣಿ ನಿರತ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡುವೆ ಎಂದರು.ಪೌರಕಾರ್ಮಿಕರ ಈ ಸಮಸ್ಯೆಯನ್ನು ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಸಭೆಯೊಳಗೆ ಇತ್ಯರ್ಥಪಡಿಸಬೇಕು. ಇಲ್ಲದೇ ಇದ್ದರೆ ಈ ಅಹೋರಾತ್ರಿ ಧರಣಿಯಲ್ಲಿ ನಾನೂ ಸೇರಿದಂತೆ ಹಲವು ಮಠಾಧೀಶರು, ಮುಖಂಡರ ನೇತೃತ್ವದಲ್ಲಿ ನ್ಯಾಯ ದೊರೆಯುವ ವರೆಗೂ ದೊಡ್ಡಮಟ್ಟದ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ, ಬಸಪ್ಪ ಮಾದರ, ನಿಂಗಪ್ಪ ಮೊರಬದ, ಮರಿಯಪ್ಪ ರಾಮಯ್ಯನವರ, ಆನಂದ ಬೆನಸಮಟ್ಟಿ ರಮೇಶ ರಾಮಯ್ಯನವರ, ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ದತಪ್ಪ ಆಪುಸಪೇಟ್, ಲಕ್ಷ್ಮೀ ಬೇತಾಪಲ್ಲಿ, ರಾಧಾ ಬಾಗಲಾಡ, ಯಲಪ್ಪ ಪಾಳೇದ ಸೇರಿದಂತೆ ಹಲವರಿದ್ದರು.