ಮಲ್ಲಾಡಿಹಳ್ಳಿ ಆಶ್ರಮದ ಅಧ್ಯಕ್ಷರಾಗಿ ಮಾದಾರ ಶ್ರೀ

KannadaprabhaNewsNetwork |  
Published : Jun 04, 2025, 01:17 AM IST
ಚಿತ್ರದುರ್ಗ ಮೂರನೇ ಪುಟಕ್ಕೆ ಪ್ರಮುಖ | Kannada Prabha

ಸಾರಾಂಶ

ಮಲ್ಲಾಡಹಳ್ಳಿ ಅನಾಥ ಸೇವಾಶ್ರಮದ ವಿಶ್ವಸ್ಥ ಸಮಿತಿ ನೂತನ ಅದ್ಯಕ್ಷರಾಗಿ ಮಂಗಳವಾರ ಆಯ್ಕೆಯಾದ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರನ್ನು ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯರು ಗೌರವಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯ ಪ್ರತಿಷ್ಠಿತ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ಟ್ರಸ್ಟ್‌ನ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ.

ಮಂಗಳವಾರ ನಡೆದ ಟ್ರಸ್ಟ್‌ನ ವಿಶೇಷ ಸಾಮಾನ್ಯ ಸಭೆಯಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಟ್ರಸ್ಟ್‌ನ ವಿಶೇಷ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಎಸ್.ಕೆ ಬಸವರಾಜನ್, ಖಜಾಂಚಿ ಡಾ.ಜಿ.ಎನ್ ಮಲ್ಲಿಕಾರ್ಜುನಪ್ಪ, ವಿಶ್ವಸ್ತ ಮಂಡಳಿಯ ಸದಸ್ಯರಾದ ಪ್ರಕಾಶ್, ಕೆಂಗುಂಟೆ ಜಯಪ್ಪ, ಸೊಂಡೆಕೊಳ ಶ್ರೀನಿವಾಸ್, ರಾಮದಾಸ್, ರವಿಕುಮಾರ್, ರಾಜಪ್ಪ, ಶ್ರೀಕಂಠಮೂರ್ತಿ, ಎಲ್ ಎಸ್ ಶಿವರಾಮಯ್ಯ, ದ್ಯಾಮಣ್ಣ ಪಾಲ್ಗೊಂಡು ಸ್ವಾಮೀಜಿಯವರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಿದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಆವರಣದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮೀಜಿ ಹಾಗೂ ಸೂರ್ ದಾಸ್ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಶಾಲೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾದಾರ ಶ್ರೀ, ಕುಗ್ರಾಮ ಮಲ್ಲಾಡಿಹಳ್ಳಿಯನ್ನು ಗುರುತಿಸಿದ ರಾಘವೇಂದ್ರ ಸ್ವಾಮೀಜಿಯವರು ತಮ್ಮ ಅವಿರತ ಸೇವೆಯ ಮೂಲಕ ಮತ್ತು ಶಿಕ್ಷಣ ಸಂಸ್ಕಾರದ ಕ್ರಾಂತಿ ಮೂಲಕ ಗ್ರಾಮವನ್ನು ದೇಶದ ಗಮನ ಸೆಳೆಯುವಂತೆ ಮಾಡಿದರು. ಅವರ ಶ್ರಮ ವ್ಯರ್ಥವಾಗದಂತೆ ನಡೆದುಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾ.ನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು
ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು