ಉಡುಪಿ: ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ, ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಶ್ರೀ ಮಾಧವ ಮಂಗಲ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿಯನ್ನು ಅಂದಾಜು 3 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಮನವಿ ಪತ್ರ ಹಾಗೂ ರಶೀದಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಶನಿವಾರ ಶ್ರೀ ಕ್ಷೇತ್ರದ ಕಚೇರಿಯಲ್ಲಿ ನೆರವೇರಿತು.
ರಶೀದಿ ಪುಸ್ತಕ ಬಿಡುಗಡೆಗೊಳಿಸಿದ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಅವರು, 3 ಕೋಟಿ ರು. ವೆಚ್ಚದ ಈ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಸಮಾಜದ ಸರ್ವ ಬಂಧುಗಳು ಒಗ್ಗಟ್ಟಿನಿಂದ ಶ್ರಮವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಮೊಗವೀರ ಸಮಾಜದ ಪ್ರಮುಖರಾದ ಗಿರಿಧರ್ ಸುವರ್ಣ, ಮೋಹನ್ ಬೆಂಗ್ರೆ, ಮನೋಜ್ ಉಳ್ಳಾಲ, ಪದ್ಮಾಕರ್ ಮಸ್ಕತ್, ಶರಣ್ ಕುಮಾರ್ ಮಟ್ಟು, ಸತೀಶ್ ಕುಂದರ್ ಮಲ್ಪೆ, ರಾಜೇಶ್ ಉಳ್ಳಾಲ, ಪವನ್ ಆನಂದ್ ಎರ್ಮಾಳ್, ಕವಿತಾ ಶರತ್, ವಾಸುದೇವ ಸಾಲ್ಯಾನ್, ದಿನೇಶ್ ಎರ್ಮಾಳ್, ಶಿವರಾಮ್ ಕೋಟ, ಸುಗುಣ ಕರ್ಕೇರ, ಸದಾನಂದ ಬಂಗೇರ ಉಳ್ಳಾಲ, ಎಂ.ಎಸ್. ಸಂಜೀವ ಕೋಟ, ಅಶೋಕ್ ಉಪ್ಪಳ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.