ಕನ್ನಡಪ್ರಭ ವಾರ್ತೆ ಮದ್ದೂರು
ಸ್ಕ್ಯಾನಿಂಗ್ ಮಾಡಿಸಿರುವ ಗರ್ಭಿಣಿ ಮಹಿಳೆಯರ ದಾಖಲೆಗಳು ಮತ್ತು ಫಾರಂಗಳನ್ನು ದಾಖಲೆ ಪರಿಶೀಲನೆ ನಡೆಸಿ, ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿ ಮತ್ತು ಅನುಷ್ಠಾನಗೊಳಿಸಬೇಕು ಎಂದರು.
ಗರ್ಭಿಣಿ ಮಹಿಳೆ ಹಾಗೂ ಬರುವ ಪೋಷಕರಿಗೆ ಜಾಗೃತಿ ಮೂಡಿಸಲು ಹಾಗೂ ಎಚ್ಚರಿಕೆ ನೀಡಿಲು ಶಿಕ್ಷೆ ಮತ್ತು ದಂಡ ಹಾಗೂ ಹೆಣ್ಣು ಮಕ್ಕಳ ಮಹತ್ವ, ಲಿಂಗ ಪತ್ತೆ ಕಾನುನೂಬಾಹಿರ ಎಂಬ ಸಾರುವ ಜಾಗೃತಿ ಮೂಡಿಸುವ ಸೂಚನ ಫಲಕಗಳನ್ನು ಸ್ಥಳೀಯ ಭಾಷೆಯಲ್ಲಿ ದೊಡ್ಡ ಗಾತ್ರದಲ್ಲಿ ಪ್ರದರ್ಶನ ಮಾಡಲು ಸೂಚಿಸಿದರು.ದಾಖಲೆಗಳನ್ನು ಕಡ್ಡಾಯವಾಗಿ ಎರಡು ವರ್ಷಗಳವರಗೆ ಇಟ್ಟಿರಬೇಕು. ಬಾಲ ಗರ್ಭಿಣಿ ಕಂಡರೆ ತಾಲೂಕು ಆಡಳಿತಕ್ಕೆ ಮತ್ತು ಆರೋಗ್ಯ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಕಡ್ಡಾಯವಾಗಿ ತಿಳಿಸುವಂತೆ ಸೂಚಿಸಿದರು.
ತಪಾಸಣೆ ವೇಳೆ ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಶಂಕರ್, ಡಿ2 ಸ್ಕ್ಯಾನಿಂಗ್ ಸೆಂಟರ್ ಮಾಲೀಕರಾದ ಡಾ.ದೀಪಕ್ ಗೌತಮ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದ ಎಲ್ಲಾ ಜಿಲ್ಲೆಗಳಿಂದ ೫೦೦ಕ್ಕೂ ಹೆಚ್ಚು ಮಹಿಳಾ ಪ್ರತಿನಿಧಿಗಳು ಭಾಗವಹಿಸುವರು. ಸಂಘಟನೆ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಶ್ರಮಿಸಿದ ಹಾದಿ, ನಡೆಸಿದ ಜನಪರ ಹೋರಾಟ, ಕಾರ್ಯಕ್ರಮಗಳನ್ನು ವಿಮರ್ಶೆ ಮಾಡಿಕೊಳ್ಳುವುದರ ಜೊತೆಗೆ ಮುಂದಿನ ಮೂರು ವರ್ಷಗಳಲ್ಲಿ ನಡೆಸಬೇಕಾದ ಕಾರ್ಯಚಟುವಟಿಕೆಗಳ ಕುರಿತು ಯೋಜನೆ ರೂಪಿಸುವುದರ ಜೊತೆಗೆ ನೂತನ ರಾಜ್ಯ ಸಮಿತಿಯನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗೋಷ್ಠಿಯಲ್ಲಿ ಡಿ.ಕೆ.ಲತಾ, ಸುಶೀಲಾ, ವಿ.ಕಲಾವತಿ, ಸುನೀತಾ, ಶೋಭಾ, ಪ್ರೇಮಮ್ಮ, ಪ್ರೇಮಾ, ಸವಿತಾ. ಜಯಲಕ್ಷ್ಮಮ್ಮ ಇದ್ದರು.