ಕನ್ನಮಂಗಲ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಧ್ಯಾರಾಧನೆ

KannadaprabhaNewsNetwork |  
Published : Aug 22, 2024, 12:52 AM IST
ದೇವನಹಳ್ಳಿ ತಾಲೂಕು ಕನ್ನಮಂಗಲದ ನಂಜನಗೂಡು ರಾಯರ ಮಠದಲ್ಲಿ ಬೃಂದಾವನಕ್ಕೆ ಮಧ್ಯಾರಾಧನೆ ಅಂಗವಾಗಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು | Kannada Prabha

ಸಾರಾಂಶ

ತಾಲೂಕಿನ ಕನ್ನಮಂಗಲದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂರ್ವಾರಾಧನೆ, ಮಧ್ಯಾರಾಧನೆ ಅಂಗವಾಗಿ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.

ದೇವನಹಳ್ಳಿ: ತಾಲೂಕಿನ ಕನ್ನಮಂಗಲದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂರ್ವಾರಾಧನೆ, ಮಧ್ಯಾರಾಧನೆ ಅಂಗವಾಗಿ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ ಹಸ್ತೋಧಕ ಕಾರ್ಯಕ್ರಮಗಳು ನಡೆಯಿತು. ಡಾ.ಮೀರಾ ವಿಜಯಕುಮಾರ್‌ ಸಂಗಡಿಗರಿಂದ ಪಂಚವೀಣಾ ಸಂಗೀತ ಕಾರ್ಯಕ್ರಮ ಜರುಗಿತು. ಗುರುವಾರ ಮಠದಲ್ಲಿ ರಾಯರ ಬೃಂದಾವನಕ್ಕೆ ಉತ್ತರಾಧನೆ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ನಡೆಯಲಿವೆ ಎಂದು ಕನ್ನಮಂಗಲ ಮಂಜುನಾಥ್‌ ತಿಳಿಸಿದರು. ಭಕ್ತರು ಆಗಮಿಸಿ ರಾಯರ ದರ್ಶನ ಮಾಡಿ ತೀರ್ಥ ಪ್ರಸಾದ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ