ಹೆಬ್ಬಸೂರು ಗ್ರಾಪಂ ಉಪಾಧ್ಯಕ್ಷರಾಗಿ ಮಧು ಆಯ್ಕೆ

KannadaprabhaNewsNetwork |  
Published : May 06, 2025, 12:16 AM IST
ಹೆಬ್ಬಸೂರು ಗ್ರಾ.ಪಂ. ಉಪಾಧ್ಯಕ್ಷರಾಗಿ  ಎಚ್.ಎಂ. ಮಧು  ಆವಿರೋಧ  ಆಯ್ಕೆ  | Kannada Prabha

ಸಾರಾಂಶ

ಚಾಮರಾಜನಗರ ತಾಲೂಕಿನ ಹೆಬ್ಬಸೂರು ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಚ್.ಎಂ. ಮಧು ಅವಿರೋಧ ಆಯ್ಕೆಯಾದರು.

ಕನ್ನಡಪ್ರಭವಾರ್ತೆ ಚಾಮರಾಜನಗರ

ತಾಲೂಕಿನ ಹೆಬ್ಬಸೂರು ಗ್ರಾಪಂಗೆ ನೂತನ ಉಪಾಧ್ಯಕ್ಷರಾಗಿ ಎಚ್.ಎಂ.ಮಧು ಸೋಮವಾರ ಅವಿರೋಧ ಆಯ್ಕೆಯಾದರು. ಗ್ರಾಪಂ ಉಪಾಧ್ಯಕ್ಷರಾಗಿದ್ದ ಸಾದಿಕ್‌ಉಲ್ಲಾ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಗ್ರಾಪಂ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಎಚ್.ಎಂ.ಮಧು ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಉದಯಕುಮಾರ್ ಅಧಿಕೃತ ಉಪಾಧ್ಯಕ್ಷರ ಆಯ್ಕೆಯನ್ನು ಘೋಷಣೆ ಮಾಡಿದರು. ಮಾದರಿ ಗ್ರಾಪಂ ಮಾಡಲು ಶ್ರಮಿಸೋಣ:

ನೂತನ ಉಪಾಧ್ಯಕ್ಷ ಎಚ್.ಎಂ. ಮಧು ಅಧಿಕಾರ ವಹಿಸಿಕೊಂಡು ಮಾತನಾಡಿ, ಗ್ರಾಪಂಗೆ ಉಪಾಧ್ಯಕ್ಷರನ್ನಾಗಿ ನನ್ನನ್ನು ಅವಿರೋಧ ಆಯ್ಕೆ ಮಾಡಿದ ಸರ್ವ ಸದಸ್ಯರಿಗೂ, ಬೆಂಬಲ ನೀಡಿದ ಎಲ್ಲ ಮುಖಂಡರಿಗೂ ಆಭಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಪಂಚಾಯಿತಿ ವ್ಯಾಪ್ತಿಯ ಹೆಬ್ಬಸೂರು, ದಡದಹಳ್ಳಿ, ಅರಳಿಪುರ, ಮಲ್ಲದೇವನಹಳ್ಳಿ ಗ್ರಾಮಗಳ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಿ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು. ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಕೆ. ಪದ್ಮ, ಮಾಜಿ ಉಪಾಧ್ಯಕ್ಷ ಸಾಧಿಕ್ ಉಲ್ಲಾ, ಸದಸ್ಯರಾದ ಎಚ್.ಎಂ. ಜಯಶಂಕರ, ಪುಷ್ಪಲತಾ, ಮಂಜುಳ, ಭಾಗ್ಯಮ್ಮ, ಗೋವಿಂದರಾಜು, ಪ್ರತಿಮಾ, ಪಿ.ಮೂರ್ತಿ, ಎಸ್. ರಶ್ಮಿ, ಜಿ.ಮಹದೇವಸ್ವಾಮಿ, ವಸಂತ, ಭಾಗ್ಯ, ಅನಂದ, ಸಿ.ಎ.ಆಶಾ, ಕುಮಾರ್, ಪಿಡಿಒ ಎ. ರಂಜಿತಾ, ಕಾರ್ಯದರ್ಶಿ ಪ್ರಕಾಶ್ ಇದ್ದರು. ವಿಜಯೋತ್ಸವ: ಎಚ್.ಎಂ.ಮಧು ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಗ್ರಾಮದ ಮುಖಂಡರು, ಯುವಕರು ನೂತನ ಉಪಾಧ್ಯಕ್ಷರಿಗೆ ಹಾರ ಹಾಕಿ ಶಾಲು ಹೊದಿಸಿ ಅಭಿನಂದಿಸಿದರು. ಮುಖಂಡರಾದ ವೀರಭದ್ರಸ್ವಾಮಿ, ರಂಗಸ್ವಾಮಿ, ಉಮೇಶ್, ದಡದಹಳ್ಳಿ ಶಿವಣ್ಣ, ಮುತ್ತಲ್, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ನಂಜುಂಡಸ್ವಾಮಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!