ಮಡಿಕೇರಿ: 23ರಂದು ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತಗಾಯನ

KannadaprabhaNewsNetwork |  
Published : Nov 21, 2025, 02:45 AM IST

ಸಾರಾಂಶ

ಕೊಡಗು ಪತ್ರಕರ್ತರ ಸಂಘದಿಂದ ಮುಳಿಯ ಚಿನ್ನಾಭರಣ ಸಂಸ್ಥೆಯ ಸಹಯೋಗದಲ್ಲಿ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’- ಗೀತಗಾಯನ ಕಾರ್ಯಕ್ರಮ 23ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.

ಮಡಿಕೇರಿ: ಕನ್ನಡದ ಮೊದಲ ನಾಡಗೀತೆ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡಿಗೆ ನೂರು ವರ್ಷ ತುಂಬಿರುವ ಹಿನ್ನಲೆಯಲ್ಲಿ ಕೊಡಗು ಪತ್ರಕರ್ತರ ಸಂಘದಿಂದ ಮುಳಿಯ ಚಿನ್ನಾಭರಣ ಸಂಸ್ಥೆಯ ಸಹಯೋಗದಲ್ಲಿ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’- ಗೀತಗಾಯನ ಕಾರ್ಯಕ್ರಮ 23ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5.30ಕ್ಕೆ ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮಕ್ಕೆ ಮುಳಿಯ ಚಿನ್ನಾಭರಣ ಸಂಸ್ಥೆ ಸಹಯೋಗ ನೀಡಿದ್ದು 3 ಗಂಟೆ ಅವಧಿಯ ಕನ್ನಡ ಗೀತೆಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ 33 ಗಾಯಕ, ಗಾಯಕಿಯರು ಹಾಡಲಿದ್ದಾರೆ ಎಂದರು. 1924 ರಲ್ಲಿ ಕನ್ನಡದ ಹೆಸರಾಂತ ಕವಿ, ಸಾಹಿತಿ ಹುಯಿಲಗೋಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು.. ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಸಮ್ಮುಖದಲ್ಲಿ ಹಾಡಲ್ಪಟ್ಟು ಕನ್ನಡದ ಮೊದಲ ನಾಡಗೀತೆ ಎಂಬ ಹಿರಿಮೆಗೆ ಪಾತ್ರವಾಗಿತ್ತು. ಆ ಅಪೂರ್ವ ಹಾಡಿನ ಶತಸಂಭ್ರಮವನ್ನೂ ಮಡಿಕೇರಿಯಲ್ಲಿ ಗೀತಗಾಯನಗಳ ಮೂಲಕ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಮುಳಿಯ ಚಿನ್ನಾಭರಣ ಸಂಸ್ಥೆಗಳ ಆಡಳಿತ ವಿಭಾಗದ ಮುಖ್ಯಸ್ಥ ತೀತಿಮಾಡ ಸೋಮಣ್ಣ ಮಾತನಾಡಿ, ಈ ಮೊದಲು ಮುಳಿಯ ಸಂಸ್ಥೆಯು ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗಾನರಥ ಎಂಬ ಕಾರ್ಯಕ್ರಮ ಆಯೋಜಿಸಿತ್ತು ಎಂದು ತಿಳಿಸಿದರು.ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಮಾತನಾಡಿ, ಕನ್ನಡ ನಾಡಿನ ಸಂಸ್ಕೖತಿ, ನೆಲಜಲದ ಮಹತ್ವ ಸಾರುವ ಗಾಯನ ಕಾಯಕ್ರಮದ ಮೂಲಕ ಕನ್ನಡದ ಮಹತ್ವವನ್ನು ತಿಳಿಸುವ ಪ್ರಯತ್ನ ನಡೆಸಲಾಗಿದೆ. ಕನ್ನಡ ಭಾಷೆ, ಸಾಹಿತ್ಯ ಬೆಳವಣಿಗೆ ನಿಟ್ಟಿನಲ್ಲಿ ಇಂಥ ಕಾರ್ಯಕ್ರಮಗಳನ್ನು ಮತ್ತಷ್ಟು ಹಮ್ಮಿಕೊಳ್ಳಲಿದ್ದೇವೆ ಎಂದರು. ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಟಿ.ಪಿ. ರಮೇಶ್ ಮಾತನಾಡಿ, ಈ ವಿನೂತನ ಕಾಯ೯ಕ್ರಮದ ಮೂಲಕ ಮಡಿಕೇರಿಯಲ್ಲಿ ನ.23 ರಂದು ಗಾಯನ ಲೋಕವೇ ಅನಾವರಣಗೊಳ್ಳಲಿದೆ ಎಂದರು.

ಸಂಘದ ಗೌರವ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಗಾಯನ ಕಾಯ೯ಕ್ರಮದ ಮೂಲಕ ಹೆಚ್ಚಿನ ಸಾಹಿತ್ಯಾಸಕ್ತರನ್ನು ತಲುಪುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬೈ ಮೇಯರ್‌ ಹುದ್ದೆಗೆ ಶಿಂಧೆ ಲಡಾಯಿ?
ಧೂಮಪಾನಕ್ಕಿಂತಲೂ ಇದು ಡೇಂಜರ್ : ಸಾವನ್ನಪ್ಪಿದವರು ಅಧಿಕ