ಮಡಿಕೇರಿ ನಗರ ಅಭಿವೃದ್ಧಿಗೆ ಆದ್ಯತೆ: ಡಾ.ಮಂತರ್‌

KannadaprabhaNewsNetwork |  
Published : May 16, 2026, 01:30 AM IST
 | Kannada Prabha

ಸಾರಾಂಶ

ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಶುಕ್ರವಾರ ಮಡಿಕೇರಿಯಲ್ಲಿ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಶುಕ್ರವಾರ ಮಡಿಕೇರಿಯಲ್ಲಿ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಡಾ.ಮಂತರ್ ಗೌಡ, ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ, ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದ್ದರಿಂದ ಮಡಿಕೇರಿ ನಗರದ ಅಭಿವೃದ್ಧಿಗೆ ಪ್ರಥಮ ಆದ್ಯತೆ ಮೇಲೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂದರು.

ಈಗಾಗಲೇ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅದೇ ರೀತಿ ಗುಂಡಿ ಬಿದ್ದ ರಸ್ತೆಗಳನ್ನು ಮುಚ್ಚುವುದು, ಹಲವು ಕಡೆಗಳಲ್ಲಿ ರಸ್ತೆ ನಿರ್ಮಿಸುವುದು, ಅಗತ್ಯವಿರುವ ಕಡೆ ತಡೆಗೋಡೆ ನಿರ್ಮಾಣ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕರು ವಿವರಿಸಿದರು.

ನಗರಸಭೆ ಅಧ್ಯಕ್ಷ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಅರುಣ್ ಶೆಟ್ಟಿ, ಶಾರದ ನಾಗರಾಜು, ನಗರಸಭೆ ಸದಸ್ಯರು ಇತರರು ಇದ್ದರು.

ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯಡಿ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದ ಕಾಮಗಾರಿ ವಿವರ ಇಂತಿದೆ.

ಅಬ್ಬಿಪಾಲ್ಸ್ ರಸ್ತೆ ಅಭಿವೃದ್ಧಿ (ರೂ.18 ಲಕ್ಷ), ಗೌಳಿಬೀದಿ ರಸ್ತೆ(28 ಲಕ್ಷ), ಗೌಡ ಸಮಾಜದ ಚೈನ್‍ಗೇಟ್‍ವರೆಗೆ ರಸ್ತೆ ಅಭಿವೃದ್ಧಿ(20 ಲಕ್ಷ), ಗ್ರಾಮಾಂತರ ಪೊಲೀಸ್ ಠಾಣೆ ಮುಂಭಾಗ ಮೋರಿ ಹಾಗೂ ರಸ್ತೆ ಅಭಿವೃದ್ಧಿ(27 ಲಕ್ಷ), ಸಂತ ಜೋಸೆಫರ ಶಾಲೆಗೆ ಹೋಗುವ ರಸ್ತೆ ಅಭಿವೃದ್ಧಿ(17 ಲಕ್ಷ), ಕ್ರಿಸ್ಟಲ್ ಹಾಲ್ ಮುಂಭಾಗ ಹಾದು ಹೋಗುವ ರಸ್ತೆ ಅಭಿವೃದ್ಧಿ(10 ಲಕ್ಷ), ಕೊಡವರ ರುದ್ರಭೂಮಿಗೆ ಹೋಗುವ ರಸ್ತೆ ಅಭಿವೃದ್ಧಿ(5 ಲಕ್ಷ), ವಾರ್ಡ್ ಸಂಖ್ಯೆ -4 ಬ್ಲಾಕ್ ಸಂಖ್ಯೆ 24 ರಲ್ಲಿ ಶರೀಫ್ ಮತ್ತು ಸಲೀಂ ಮನೆಯ ಮುಂಭಾಗದಲ್ಲಿ ತಡೆಗೋಡೆ ನಿರ್ಮಾಣ (15 ಲಕ್ಷ), ವಾಡ್ ಸಂಖ್ಯೆ 6, ಬ್ಲಾಕ್ ಸಂಖ್ಯೆ 23 ರಲ್ಲಿ ನೇತಾಜಿ ಜಂಕ್ಷನ್ ಹತ್ತಿರ ರಾಘವೇಂದ್ರ ದೇವಾಲಯದ ರಸ್ತೆ ಬದಿಯಲ್ಲಿ ಅಯ್ಯಪ್ಪ ಹಾಗೂ ಮಾದಪ್ಪ ಅವರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ತಡೆಗೋಡೆ ನಿರ್ಮಾಣಕ್ಕೆ (10 ಲಕ್ಷ), ವಾರ್ಡ್ ಸಂಖ್ಯೆ 9, ಬ್ಲಾಕ್ ಸಂಖ್ಯೆ 1 ರಲ್ಲಿ ಮಲ್ಲಿಕಾರ್ಜುನ ನಗರದ ಅದ್ದೂರು ಅವರ ಮನೆ ಮುಂಭಾಗದಲ್ಲಿ ತಡೆಗೋಡೆ ನಿರ್ಮಾಣ(5 ಲಕ್ಷ), ವಾರ್ಡ್ ಸಂಖ್ಯೆ 13, ಬ್ಲಾಕ್ ಸಂಖ್ಯೆ 18 ರಲ್ಲಿ ಲತಾ ರವಿ ಅವರ ಮನೆಯ ಹತ್ತಿರ ತಡೆಗೋಡೆ ನಿರ್ಮಾಣ ಕಾಮಗಾರಿ(10 ಲಕ್ಷ), ವಾರ್ಡ್ ನಂ.22, ಬ್ಲಾಕ್ ಸಂಖ್ಯೆ 16 ರಲ್ಲಿ ರೋಸ್ನಿ ಕಾವೇರಪ್ಪ ಅವರ ಮನೆ ಮುಂಭಾಗ ತಡೆಗೋಡೆ ನಿರ್ಮಾಣ ಕಾಮಗಾರಿ(15 ಲಕ್ಷ), ವಾರ್ಡ್ ಸಂಖ್ಯೆ 15, ಬ್ಲಾಕ್ ಸಂಖ್ಯೆ 13 ರಲ್ಲಿ ರೆಡ್‍ಪರ್ನ್ ಹತ್ತಿರ ತಡೆಗೋಡೆ ನಿರ್ಮಾಣ ಕಾಮಗಾರಿ(15 ಲಕ್ಷ), ವಾರ್ಡ್ ಸಂಖ್ಯೆ 17, ಬ್ಲಾಕ್ ಸಂಖ್ಯೆ 9 ರಲ್ಲಿ ರೈಸ್‍ಮಿಲ್ ಹಿಂಭಾಗ ಮತ್ತು ಕುಮಾರ ಅವರ ಮನೆ ಮುಂಭಾಗ ತಡೆಗೋಡೆ ನಿರ್ಮಾಣ ಕಾಮಗಾರಿ(5 ಲಕ್ಷ ರೂ), ವಾರ್ಡ್ ಸಂಖ್ಯೆ 23, ಬ್ಲಾಕ್ ಸಂಖ್ಯೆ 19 ರಲ್ಲಿ ಹಿರೇ ಅವರ ಮನೆಯ ಹಿಂಭಾಗ ತಡೆಗೋಡೆ ನಿರ್ಮಾಣ ಕಾಮಗಾರಿ(10 ಲಕ್ಷ ರೂ.) ಒಟ್ಟು ಸುಮಾರು 272 ಲಕ್ಷ ರೂ.ಗಳ ಕಾಮಗಾರಿಗೆ ಶಾಸಕರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಕಲ್ಯಾಣಾರ್ಥ ರುದ್ರಯಾಗ ಅರ್ಥಪೂರ್ಣ: ರಾಮಲಿಂಗ ರೆಡ್ಡಿ
ಹಿಜಾಬ್‌ ನಿಷೇಧ ರದ್ದು ನಿರ್ಧಾರ ಸರಿ: ರಾಮಲಿಂಗಾ ರೆಡ್ಡಿ