ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಾನಪದ ಪರಿಷತ್ ವತಿಯಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಸಹಯೋಗದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಜಾನಪದ ದಸರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಳೆಯ ನಡುವೆಯೂ ದಸರಾಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು.ನಾಡಹಬ್ಬ ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ದಸರಾಗೆ ಹೆಚ್ಚಿನ ಸ್ಪಂದನೆ ದೊರೆತಿರುವುದು ಮೆಚ್ಚುವಂತದ್ದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು.
ಕೃಷಿಕ ಮಹಿಳೆ ಭಾಗೀರಥಿ ಹುಲಿತಾಳ ಮಾತನಾಡಿ, ಜಾನಪದ ಹಾಡು, ಕತೆಗಳು ಎಂದೆಂದಿಗೂ ಸಾರ್ವಕಾಲೀಕವಾಗಿವೆ ಎಂದರು.
ಭಾವಪೂರ್ಣವಾಗಿ ಜಾನಪದ ಗೀತೆಗಳನ್ನು ಹಾಡುವುದು ಇಂದಿಗೂ ಸಹ ಇದೆ. ಜಾನಪದ ಸಾಹಿತ್ಯ ಹಾಡುವುದು ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಲಿದೆ ಎಂದರು.
ಮಡಿಕೇರಿ ದಸರಾ ಕರಗ ಉತ್ಸವದೊಂದಿಗೆ ಆರಂಭವಾಗಿ ಮಹಿಳಾ, ಮಕ್ಕಳ, ಯುವ, ಕಾಫಿ ಹೀಗೆ ಹಲವು ದಸರಾವನ್ನು ಆಚರಿಸುತ್ತಿರುವುದು ಮೆಚ್ಚುವಂತದ್ದು ಎಂದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ ಅವರು ಮಾತನಾಡಿ, ದೇಶ ಬಹು ಸಂಸ್ಕೃತಿ, ಬಹು ಪರಂಪರೆ ವೈವಿಧ್ಯತೆಯನ್ನು ಒಳಗೊಂಡಿದ್ದು, ನಾಡಹಬ್ಬ ದಸರಾದಲ್ಲಿಯೂ ಸಹ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುತ್ತೇವೆ ಎಂದರು.
ನಾಡಿನಲ್ಲಿ ಜಾನಪದ ಕಲೆ, ಸಂಸ್ಕೃತಿಗೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದರು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್ ಅವರು ಮಾತನಾಡಿದರು. ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಕುಡೆಕಲ್ ಸಂತೋಷ್, ಜಾನಪದ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರಾದ ಚಂದ್ರಮೋಹನ್, ಪ್ರಕಾಶ್, ಟೋನಿ ಥಾಮಸ್, ಸುಜಲಾದೇವಿ, ಪ್ರಶಾಂತ್, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಲೋಕೇಶ್ ಸಾಗರ್ ಇತರರು ಇದ್ದರು.
ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಸ್ವಾಗತಿಸಿದರು. ಖಜಾಂಜಿ ಸಂಪತ್ ಕುಮಾರ್ ವಂದಿಸಿದರು.