ಕನ್ನಡಪ್ರಭ ವಾರ್ತೆ ಮಡಿಕೇರಿ
ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷ, ಎಲ್ಲ ಮಂಟಪ ಸಮಿತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ದಸರಾ ಉತ್ಸವ ಆಚರಿಸಲಾಗವುದು. ಮಂಟಪಗಳಿಗೆ ಹೆಚ್ಚಿನ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.
ಎಚ್.ಮಂಜುನಾಥ್ ಮಾತನಾಡಿ, ಜಿಲ್ಲಾಡಳಿತ, ದಸರಾ ಸಮಿತಿ, ಶಾಸಕರ ಸಹಕಾರದಿಂದ ಕಳೆದ ಬಾರಿ ದಸರಾವನ್ನು ಉತ್ತಮವಾಗಿ ನಡೆಸಲಾಗಿದೆ. ದಸರಾ ಸಮಿತಿಯಿಂದ ದಶಮಂಟಪ ಸಮಿತಿಗೆ ಸೂಕ್ತ ಮಾನ್ಯತೆ ಸಿಗಬೇಕು ಎಂದರು.ದಸರಾ ಸಮಿತಿ ಕಾಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಕೋಟೆ ಗಣಪತಿ ದೇವಾಲಯದ ಬಿ.ಎಂ.ರಾಜೇಶ್, ಕರವಲೆ ಭಗವತಿ ದೇವಾಲಯದ ಗಜೇಂದ್ರ, ಕೋಟೆ ಗಣಪತಿ ದೇವಾಲಯದ ವಿಕ್ಕಿ, ದಶಮಂಟಪ ಸಮಿತಿ ಗೌರವಾಧ್ಯಕ್ಷ ಮನು ಮಂಜುನಾಥ್, ಕೋದಂಡರಾಮ ದೇವಾಲಯ ಟ್ರಸ್ಟ್ ಅಧ್ಯಕ್ಷ ನಂಜುಂಡ, ಕೋದಂಡರಾಮ ದೇವಾಲಯದ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಕುಶಾಲ್, ಮಾಜಿ ಅಧ್ಯಕ್ಷ ಗೋಪಿನಾಥ್, ದಶಮಂಟಪ ಸಮಿತಿ ಖಜಾಂಚಿ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಜಗದೀಶ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ ಇದ್ದರು.