ಮಡಿಕೇರಿ ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ

KannadaprabhaNewsNetwork |  
Published : Aug 19, 2026, 02:30 AM IST
ಚಿತ್ರ : 17ಎಂಡಿಕೆ5 : ದಶಮಂಟಪ ಸಮಿತಿಯ ಅಧಿಕಾರ ಹಸ್ತಾಂತರ  ಮಾಡಲಾಯಿತು.  | Kannada Prabha

ಸಾರಾಂಶ

ಶ್ರೀ ಕೋಟಿ ಮಹಾಗಣಪತಿ ದಸರಾ ದಶ ಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ ದಶಮಂಟಪ ಸಮಿತಿ ಅಧಿಕಾರವನ್ನು ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ಕೋಟೆ ಗಣಪತಿ ದೇವರಿಗೆ ಪೂಜೆ ಮಾಡುವ ಮೂಲಕ ಶ್ರೀ ಕರಾವಳಿ ಭಗವತಿ ದೇವಾಲಯದಿಂದ ಆಯ್ಕೆಯಾದ ಪದಾಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.​

ಮಡಿಕೇರಿ: ಶ್ರೀ ಕೋಟಿ ಮಹಾಗಣಪತಿ ದಸರಾ ದಶ ಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ ದಶಮಂಟಪ ಸಮಿತಿ ಅಧಿಕಾರವನ್ನು ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ಕೋಟೆ ಗಣಪತಿ ದೇವರಿಗೆ ಪೂಜೆ ಮಾಡುವ ಮೂಲಕ ಶ್ರೀ ಕರಾವಳಿ ಭಗವತಿ ದೇವಾಲಯದಿಂದ ಆಯ್ಕೆಯಾದ ಪದಾಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.​ಈ ಸಂದರ್ಭ ಮಾತನಾಡಿದ ಬಿ.ಎಂ. ಹರೀಶ್ ಅವರು, ಕಳೆದ ಬಾರಿಯಂತೆ ಈ ಬಾರಿಯೂ ತಮ್ಮ ದೇವಾಲಯಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಈ ಸಾಲಿನ ದಶಮಂಟಪ ಸಮಿತಿ ಅಧ್ಯಕ್ಷ ಸಜನ್ ಪೂಣಚ್ಚ ಅವರಿಗೆ ಎಲ್ಲ ದಾಖಲೆಗಳನ್ನೊಳಗೊಂಡ ಫೈಲ್ ಅನ್ನು ಹಸ್ತಾಂತರಿಸಿದರು.

ನಗರಸಭೆ ಉಪಾಧ್ಯಕ್ಷ ಮಹೇಶ್ ಶೈನಿ, ಸದಸ್ಯರಾದ ಸವಿತಾ ರಾಕೇಶ್, ನಗರ ದಸರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಅರುಣ್ ಶೆಟ್ಟಿ, ಉಮೇಶ್ ಸುಬ್ರಮಣಿ ಕೋಟೆ ಗಣಪತಿ ಸಮಿತಿ ಅಧ್ಯಕ್ಷರಾದ ಶರಣು ಪೂಣಚ್ಚ ಹಾಗೂ ಸತೀಶ್ ಶೇಟ್, ಚಂದ್ರಶೇಖರ್, ಪುನೀತ್, ರಾಜೇಶ್ ಬಿ.ಎಂ., ಸವಿತಾ ಅರುಣ್ ಸಂತೋಷ್ ಅನ್ವೇಕರ್, ಗುರುಕಿರಣ್ ಬಿ.ಪಿ. ಮನೋಹರ್, ಸುಮೇಶ್, ಎಸ್.ಎ. ವಿನಾಯಕ್. ಸಾತ್ವಿಕ್. ಲೋಚನ್ ಅನ್ವೇಕರ್ ಉಮೇಶ್ ಇದ್ದರು.

ಶ್ರೀ ಕರಾವಳಿ ಭಗವತಿ ದೇವಾಲಯದ ದಶಮಂಟಪ ಸಮಿತಿ ಪದಾಧಿಕಾರಿಗಳಾದ ಡಿನ್ ಬೋಪಣ್ಣ, ಸಚಿನ್ ಕರಿಯಪ್ಪ, ಜಗದೀಶ್ ರೈ, ಆಕಾಶ್ ಭಂಡಾರಿ, ರವಿನ್ ಮಚಯ್ಯ, ಅಚ್ಚಯ್ಯ, ದರ್ಶನ್, ಕುಶಾ ಹಾಗೂ ಕಂಚಿ ಕಾಮಾಕ್ಷಿ ದೇವಸ್ಥಾನದ ಗಿರೀಶ್, ಪ್ರಶಾಂತ್, ದಂಡಿನ ಮಾರಿಯಮ್ಮ ದೇವಾಲಯದಿಂದ ನಾಗರಾಜ್, ಚೌಡೇಶ್ವರಿ ದೇವಾಲಯದಿಂದ ಡಿ.ಪಿ. ನಾಗೇಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದ್ಭಾವನಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ನಿರಂತರ ಶ್ರಮದಿಂದ ಯಶಸ್ಸು: ಸಿಎ ರಾಘವೇಂದ್ರ ಶೆಟ್ಟಿ