ಕನ್ನಡಪ್ರಭ ವಾರ್ತೆ ಮಡಿಕೇರಿ
ಪೇಟೆ ಶ್ರೀ ರಾಮಮಂದಿರ, ಕೋಟೆ ಮಹಾ ಗಣಪತಿ, ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋಟೆ ಮಾರಿಯಮ್ಮ, ಕೋದಂಡ ರಾಮ, ಚೌಡೇಶ್ವರಿ, ಕರವಲೆ ಭಗವತಿ, ದೇಚೂರು ಶ್ರೀ ರಾಮ ಮಂದಿರ ದೇವಾಲಯದ ಮಂಟಪಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ.
ಶನಿವಾರ ರಾತ್ರಿ 9 ಗಂಟೆಯಿಂದ ಶೋಭಾಯಾತ್ರೆ ಆರಂಭವಾಗಿ ಭಾನುವಾರ ಮುಂಜಾನೆ ವರೆಗೂ ನಡೆಯಲಿದೆ. ಒಂದೊಂದು ಮಂಟಪಗಳು ಕೂಡ ವಿಭಿನ್ನ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿದ್ದು, ದೇವಾನುದೇವತೆಗಳ ಚಲನವಲನ ಇರಲಿದೆ. ಇದಕ್ಕಾಗಿ ಮಡಿಕೇರಿಗೆ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷಿಯಿದೆ.ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ನಡೆಯಲಿರುವ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನೆರವೇರಲು ಒಟ್ಟು ಸುಮಾರು 2,000 ಪೊಲೀಸ್ ಸಿಬ್ಬಂದಿ ನಿಯೋಜಿಸಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.
ಮಡಿಕೇರಿ ದಸರಾಗೆ 1.5 ಲಕ್ಷ ಮಂದಿ ಆಗಮಿಸುವ ನಿರೀಕ್ಷೆಯಿದೆ. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ, ಟ್ರಾಫಿಕ್ ನಿರ್ವಹಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಿಶೇಷ ತಂಡಗಳನ್ನು ರಚಿಸಿ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.
ಗೋಣಿಕೊಪ್ಪ ದಸರಾದಲ್ಲಿಯೂ ಹೆಚ್ಚಿನ ಜನ ಸೇರುವುದರಿಂದ ವಿಜಯದಶಮಿಯಂದು ಸಂಜೆ 6 ರಿಂದ ಮುಂದಿನ ದಿನ ಬೆಳಿಗ್ಗೆ 6 ಗಂಟೆಯವರೆಗೆ ಸಂಚಾರಿ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ದಶಮಂಟಪಗಳ ತೀರ್ಪಿನ ಸಮಯ
ಮಂಟಪ........ ಸಮಯ............ ಸ್ಥಳ
ದೇಚೂರು ಶ್ರೀ ರಾಮಮಂದಿರ- ರಾತ್ರಿ 11- ನಗರಸಭೆ ಮುಂಭಾಗ
ಚೌಡೇಶ್ವರಿ- ರಾತ್ರಿ 11.40- ಹೋಟೆಲ್ ಪಾಪ್ಯುಲರ್ ಮುಂಭಾಗ
ಕಂಚಿ ಕಾಮಾಕ್ಷಿ- ಮುಂಜಾವು 3.25- ವಿನೋದ್ ಮೆಡಿಕಲ್ ಮುಂಭಾಗಚೌಟಿ ಮಾರಿಯಮ್ಮ- ಮುಂಜಾವು 4- ಕಾವೇರಿ ಕಲಾಕ್ಷೇತ್ರ ಮುಂಭಾಗ
ಕೋದಂಡ ರಾಮ- ಮುಂಜಾವು 1- ಮೆಟ್ರೋ ಫ್ರೆಷ್ ಮುಂಭಾಗಕೋಟೆ ಮಾರಿಯಮ್ಮ- ಮುಂಜಾವು 1.35- ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಮುಂಭಾಗ
ಕೋಟೆ ಗಣಪತಿ- ರಾತ್ರಿ 12.20- ನಗರ ಪೊಲೀಸ್ ಠಾಣೆ ಮುಂಭಾಗಕರವಲೆ ಭಗವತಿ- ಮುಂಜಾವು 2.10- ಸಿಂದೂರ್ ಬಟ್ಟೆ ಮಳಿಗೆ ಮುಂಭಾಗ