ಕನ್ನಡಪ್ರಭ ವಾರ್ತೆ ಮಡಿಕೇರಿ
ಬಳಿಕ ಶಾಲಾ ಕೊಠಡಿ ವೀಕ್ಷಿಸಿದ ಸಚಿವರು, ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದರು.
ಶಿಕ್ಷಕರು ಪಾಠ ಪ್ರವಚನ ಮನ ಮುಟ್ಟುವಂತೆ ಹೇಳುತ್ತಿದ್ದಾರೆಯೇ, ಪ್ರತಿನಿತ್ಯ ಆಹಾರದ ಪಟ್ಟಿಯಂತೆ ಊಟೋಪಾಚಾರ ಕಲ್ಪಿಸಲಾಗುತ್ತಿದೆಯೇ, ಮೊಟ್ಟೆ ಬಾಳೆಹಣ್ಣು, ಚಿಕ್ಕಿ ವಿತರಿಸಲಾಗುತ್ತಿದೆಯೇ ಎಂದು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.ನಂತರ ವಿದ್ಯಾರ್ಥಿಗಳು ಮಲಗುವ ಕೊಠಡಿ, ಆಹಾರ ಸಾಮಗ್ರಿ ಕೊಠಡಿ ವೀಕ್ಷಿಸಿದರು.
ವಸತಿ ಶಾಲೆಯಲ್ಲಿ ಇನ್ನೂ ಆಗಬೇಕಿರುವ ಕೆಲಸಗಳಿಗೆ ಐಟಿಡಿಪಿ ಇಲಾಖೆಯಿಂದ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ ಹರಿಸುವುದು ಶಿಕ್ಷಕರು ಹಾಗೂ ಅಧಿಕಾರಗಳ ಜವಾಬ್ದಾರಿ ಆಗಿದೆ ಎಂದು ಸಚಿವರು ತಾಕೀತು ಮಾಡಿದರು.
ಹಾಗೆಯೇ ನಾಗರಹೊಳೆ ವ್ಯಾಪ್ತಿಯಲ್ಲಿ ಬಾಕಿ ಇರುವ ಆದಿವಾಸಿ ಕುಟುಂಬಗಳಿಗೆ ಅರಣ್ಯ ಹಕ್ಕು ಪತ್ರ ವಿತರಿಸುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ನಾಲ್ಕೇರಿ ಗ್ರಾ.ಪಂ. ಅಧ್ಯಕ್ಷ ಜೆ.ಎಂ.ಸೋಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಆರ್.ಜಿ.ಸಚಿನ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತೇಜರಾದ ಬಿ. ಹಲಸಬಾಳ ಇತರರು ಇದ್ದರು.