ವಿಶ್ವ ಪೋಲಿಯೊ ನಿರ್ಮೂಲನಾ ದಿನದ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ನಗರದ ಹಲವಾರು ಕಡೆಗಳಲ್ಲಿ ಪೋಲಿಯೊ ನಿರ್ಮೂಲನಾ ಸಂದೇಶದ ಪೋಸ್ಟರ್ಗಳನ್ನು ಅಳವಡಿಸಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ವಿಶ್ವ ಪೋಲಿಯೊ ನಿರ್ಮೂಲನಾ ದಿನದ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ನಗರದ ಹಲವಾರು ಕಡೆಗಳಲ್ಲಿ ಪೋಲಿಯೊ ನಿರ್ಮೂಲನಾ ಸಂದೇಶದ ಪೋಸ್ಟರ್ಗಳನ್ನು ಅಳವಡಿಸಲಾಯಿತು.ಈ ಅಭಿಯಾನಕ್ಕೆ ನಗರಸಭಾಧ್ಯಕ್ಷೆ ಕಲಾವತಿ ಚಾಲನೆ ನೀಡಿ, ಪ್ರತೀ ಮನೆಯಲ್ಲಿಯೂ ಎರಡರಿಂದ ಆರು ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿ, ರೋಟರಿ ವುಡ್ಸ್ ವತಿಯಿಂದ ಸಾರ್ವಜನಿಕರಲ್ಲಿ ಜಾಗೃತಿ ಉಂಟು ಮಾಡುವ ಈ ವಿನೂತನ ಅಭಿಯಾನವನ್ನು ಶ್ಲಾಘಿಸಿದರು.
ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಮಾತನಾಡಿ, ವಿಶ್ವಾದ್ಯಂತ ಪೋಲಿಯೊ ನಿರ್ಮೂಲನೆಯಲ್ಲಿ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ಲಕ್ಷಾಂತರ ಮಕ್ಕಳು ವಿಶೇಷಚೇತನರಾಗುವುದನ್ನು ಪೋಲಿಯೊ ನಿರೋಧಕ ಲಸಿಕೆ ಮೂಲಕ ರೋಟರಿ ತಪ್ಪಿಸಿದೆ ಎಂದರು.
ಜನರಲ್ಲಿ ಜಾಗೃತಿ ಉಂಟು ಮಾಡುವ ನಿಟ್ಟಿನಲ್ಲಿ ರೋಟರಿ ವುಡ್ಸ್ ವತಿಯಿಂದ ನಗರವ್ಯಾಪ್ತಿಯಲ್ಲಿ ಜಾಗೃತಿ ಸಂದೇಶದ ಪೋಸ್ಟರ್, ಬ್ಯಾನರ್ ಅಳವಡಿಸಲಾಗಿದೆ ಎಂದೂ ತಿಳಿಸಿದರು.ರೋಟರಿ ವುಡ್ಸ್ ಕಾರ್ಯದರ್ಶಿ ಪ್ರಮೀಳಾ ಶೆಟ್ಟಿ, ನಿರ್ದೇಶಕರಾದ ಕೆ.ವಸಂತ್ ಕುಮಾರ್, ಧನಂಜಯ ಶಾಸ್ತ್ರಿ, ರವಿ ಪಿ. ಸೇರಿದಂತೆ ಸದಸ್ಯರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.