ಮಡಿವಾಳ ಮಾಚಿದೇವರು ಮಹಾನ್ ಕ್ರಾಂತಿಕಾರಿ: ಎಚ್.ಎಸ್.ಮಲ್ಲಿಕಾರ್ಜುನಪ್ಪ

KannadaprabhaNewsNetwork |  
Published : Feb 03, 2024, 01:50 AM IST
ಪಟ್ಟಣದ ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ತಾಲೂಕು ಶರಣ ಸಾಹಿತ್ಯ ಪರಿಷತ್ ನ ಗೌರವ ಅಧ್ಯಕ್ಷ ಹೆಚ್.ಎಸ್.ಮಲ್ಲಿಕಾರ್ಜುನಪ್ಪ | Kannada Prabha

ಸಾರಾಂಶ

ಶರಣರು ಸಮಾಜದಲ್ಲಿದ್ದ ಮೇಲು-ಕೀಳು, ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿದ್ದ ಸಂದರ್ಭದಲ್ಲಿ ಶರಣ ಸಂಕುಲವನ್ನೆ ನಾಶ ಮಾಡಬೇಕು ಎಂದು ಬಿಜ್ಜಳನ ಸೈನಿಕರು ಶರಣರ ಮೇಲೆ ದಾಳಿ ಮಾಡಿದಾಗ ವಚನ ಸಾಹಿತ್ಯ ತನ್ನ ಬೆನ್ನಿಗೆ ಕಟ್ಟಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಬಿಜ್ಜಳನ ಸೈನ್ಯ ಎದುರಿಸಿದ ಮಹಾನ್ ಕ್ರಾಂತಿಕಾರಿ ಮಡಿವಾಳ ಮಾಚಿದೇವರು.

ಕನ್ನಡಪ್ರಭ ವಾರ್ತೆ ಚನ್ನಗಿರಿ

ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪದ ಆಸ್ಥಾನದಲ್ಲಿದ್ದ ಶ್ರೇಷ್ಠ ಶಿವ ಶರಣರಲ್ಲಿ ಒಬ್ಬರು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಎಚ್.ಎಸ್.ಮಲ್ಲಿಕಾರ್ಜುನಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ ಶರಣರು ಸಮಾಜದಲ್ಲಿದ್ದ ಮೇಲು-ಕೀಳು, ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿದ್ದ ಸಂದರ್ಭದಲ್ಲಿ ಶರಣ ಸಂಕುಲವನ್ನೆ ನಾಶ ಮಾಡಬೇಕು ಎಂದು ಬಿಜ್ಜಳನ ಸೈನಿಕರು ಶರಣರ ಮೇಲೆ ದಾಳಿ ಮಾಡಿದಾಗ ವಚನ ಸಾಹಿತ್ಯ ತನ್ನ ಬೆನ್ನಿಗೆ ಕಟ್ಟಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಬಿಜ್ಜಳನ ಸೈನ್ಯ ಎದುರಿಸಿದ ಮಹಾನ್ ಕ್ರಾಂತಿಕಾರಿ ಮಡಿವಾಳ ಮಾಚಿದೇವರು ಎಂದರು.

ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್.ಮಲ್ಲೇಶಪ್ಪ ಮಾತನಾಡಿ ಶರಣ ಸಾಹಿತ್ಯ ಪರಿಷತ್ 12ನೇ ಶತಮಾನದ ಶರಣರ ಆಚಾರ-ವಿಚಾರಗಳ ಇಂದಿನ ಯುವ ಪೀಳಿಗೆಗೆ ತಿಳಿಸಲು ದತ್ತಿ ಉಪನ್ಯಾಸ ಕಾರ್ಯಕ್ರಮಗಳ ಮಾಡುತ್ತಾ ಶರಣರ ಬದುಕು, ಅವರ ಆದರ್ಶಗಳ ತಿಳಿಸುವ ಕೆಲಸ ನಿರಂತರ ಮಾಡುತ್ತಿದ್ದು ಇಂತಹ ದತ್ತಿ ಕಾರ್ಯಕ್ರಮಗಳಿಂದ ಆದರ್ಶಗಳ ತಿಳಿದು ಅವುಗಳ ಮೈಗೂಡಿಸಿ ಮುನ್ನಡೆಯಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ಶಾಲಾ ಮುಖ್ಯ ಶಿಕ್ಷಕ ಲೋಹಿತಾಶ್ವ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜಪ್ಪ, ಮಹಾರುದ್ರಪ್ಪ, ದತ್ತಿದಾನಿ ನಿಹಾನ್, ರುದ್ರಪ್ಪ, ಬಿ.ಶಿವಲಿಂಗಪ್ಪ, ಎನ್.ಎಸ್.ರಾಜಪ್ಪ, ಶಿವರುದ್ರಪ್ಪ, ವೀರಭದ್ರಪ್ಪ, ಶಿವಣ್ಣ ಸೇರಿದಂತೆ ಮೊದಲಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!