ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮುಧೋಳದ ಸೋಮಶೇಖರ ಮೋಸಹೋದ ವ್ಯಕ್ತಿ. ಈಗ ಈತನನ್ನು ವಿವಾಹವಾಗಿದ್ದ ಶಿವಮೊಗ್ಗ ಮೂಲದ ಮಂಜುಳಾ ಸೇರಿದಂತೆ ಏಳು ಜನರ ವಿರುದ್ಧ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಏನಿದು ಪ್ರಕರಣ?:ಜಿಲ್ಲೆಯ ಮುಧೋಳದ ಸೋಮಶೇಖರ್ಗೆ ಬಹಳ ದಿನಗಳಿಂದ ಮದುವೆಯಾಗಿರಲಿಲ್ಲ. ಹೀಗಾಗಿ ಅವರು ಹೆಣ್ಣಿಗಾಗಿ ಅಲೆದಾಡುತ್ತಿದ್ದರು. ಆದ್ದರಿಂದ ಸೋಮಶೇಖರನನ್ನು ಟಾರ್ಗೆಟ್ ಮಾಡಿದ ಬ್ರೋಕರ್ಗಳು, ಹೆಣ್ಣು ಕೊಡಿಸ್ತೀವಿ ಅಂತ ಹೇಳಿ ₹4 ಲಕ್ಷ ಕೊಡಬೇಕೆಂದು ಬೇಡಿಕೆ ಇಟ್ಟಿದೆ. ಹೆಣ್ಣು ಸಿಗದೇ ಕೊನೆಗೆ ಮದುವೆಗೆ ಒಪ್ಪಿಕೊಂಡಿದ್ದ ಸೋಮಶೇಖರ್, ಬಾಗಲಕೋಟೆ ಜಿಲ್ಲೆಯ ಮುಧೋಳದ ಕಾಳಿಕಾದೇವಿ ದೇಗುಲದಲ್ಲಿ ವರ್ಷದ ಹಿಂದೆ ಶಿವಮೊಗ್ಗ ಜಿಲ್ಲೆಯ ಮಂಜುಳಾ ಎಂಬಾಕೆಯೊಂದಿಗೆ ಮದುವೆ ನಡೆದಿತ್ತು.
ಇದರಿಂದ ಬೇಸತ್ತ ಸೋಮಶೇಖರ್ ಬ್ರೋಕರ್ಗಳಿಗೆ ತಾನು ನೀಡಿದ ₹4 ಲಕ್ಷ ಹಣ ಮರಳಿಸುವಂತೆ ಕೇಳಿಕೊಂಡಿದ್ದಾನೆ. ಆದರೆ, ಈತನ ಮನವಿಗೆ ಸ್ಪಂದನೆ ಸಿಗದೇ ಹೋದಾಗ, ಕೊನೆಗೆ ಹಣ ಬಾರದೇ ಇದ್ದಾಗ ಮುಧೋಳ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ಸೋಮಶೇಖರ್ ದೂರು ದಾಖಲಿಸಿದ್ದಾರೆ.
ಆರೋಪಿ ಸತ್ಯಪ್ಪ ಮತ್ತು ಮಂಜುಳಾ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಮುಧೋಳ ಠಾಣೆ ಪೊಲೀಸರು ಮುಂದಾಗಿದ್ದಾರೆ. ಮದುವೆ ಮಾಡಿಸಿ ಹಣ ಹೊಡೆಯಲು ಇದೊಂದು ದೊಡ್ಡ ಜಾಲವೇ ಇದೆ. ಈ ಗ್ಯಾಂಗ್ ಎಲ್ಲಿ ಕಾರ್ಯಪ್ರವೃತ್ತಿಯಾಗಿದೆ ಅಂತ ಹುಡುಕಿ ತನಿಖೆ ಮಾಡುತ್ತಿದ್ದೇವೆ. ಈ ಜಾಲದಲ್ಲಿ ಆರೋಪಿಗಳು ಬೆಳಗಾವಿ, ರಾಮದುರ್ಗ, ಶಿವಮೊಗ್ಗ, ಧಾರವಾಡ ಮೂಲದವರಿದ್ದಾರೆ. ಅವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸುವ ಕೆಲಸ ಮಾಡುತ್ತೇವೆ. ಇವರಿಂದ ಈ ಹಿಂದೆಯೂ ಪ್ರಕರಣ ನಡೆದಿದೆ. ಎಲ್ಲವನ್ನ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ.ಎಸ್.ಪಿ.ಅಮರನಾಥ ರೆಡ್ಡಿ, ಬಾಗಲಕೋಟೆ