ಶ್ರೀನಿಮಿಷಾಂಬ ದೇವಾಲಯದಲ್ಲಿ ಮಾಘ ಶುದ್ಧ ಹುಣ್ಣಿಮೆ ಮಹೋತ್ಸವ

KannadaprabhaNewsNetwork |  
Published : Feb 02, 2026, 01:45 AM IST
1ಕೆಎಂಎನ್ ಡಿ25,26,27  | Kannada Prabha

ಸಾರಾಂಶ

ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನ ಶ್ರೀನಿಮಿಷಾಂಬ ದೇವಾಲಯದಲ್ಲಿ ಮಾಘ ಶುದ್ಧ ಹುಣ್ಣಿಮೆ ಮಹೋತ್ಸವದ ಅಂಗವಾಗಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನ ಶ್ರೀನಿಮಿಷಾಂಬ ದೇವಾಲಯದಲ್ಲಿ ಮಾಘ ಶುದ್ಧ ಹುಣ್ಣಿಮೆ ಮಹೋತ್ಸವದ ಅಂಗವಾಗಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಶನಿವಾರ ಮಧ್ಯರಾತ್ರಿಯಿಂದಲೇ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದ್ದು, ದೇವಾಲಯದ ಪ್ರಧಾನ ಅರ್ಚಕ ಸೂರ್ಯನಾರಾಯಣ ಭಟ್ ನೇತೃತ್ವದ ವೈದಿಕರ ತಂಡ ದೇವಿಗೆ ಪಂಚಾಮೃತ ಅಭಿಷೇಕ, ಪೂರ್ವಕ ಮಹಾಭಿಷೇಕ ಸೇವೆ, ಗಣಹೋಮ, ನಕ್ಷತ್ರ ಹೋಮ, ದುರ್ಗಾ ಹೋಮ ಹಾಗೂ ಸತ್ಯನಾರಾಯಣ ಪೂಜೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ಮಾಘ ಮಾಸದ ಹುಣ್ಣಿಮೆಯಲ್ಲಿ ಇಲ್ಲಿನ ಕಾವೇರಿ ನದಿಯಲ್ಲಿ ಮಿಂದು ಶಕ್ತಿ ದೇವತೆ ಶ್ರೀನಿಮಿಷಾಂಬ ದೇವಿ ದರ್ಶನ ಪಡೆದರೆ ಒಳಿತಾಗಲಿದೆ ಎಂಬ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಸಹಸ್ರಾರು ಭಕ್ತರು ಮಾಘ ಸ್ನಾನ ಮಾಡಿ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ತಮ್ಮ ಕಷ್ಟ ಕಾಪ್ಣ್ಯಗಳನ್ನು ನೀಗಿಸುವಂತೆ ಪ್ರಾರ್ಥನೆ ಸಲ್ಲಿಸಿದರು.

ದೇವಾಲಯದ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳಿಂದ ಭಕ್ತಿ ಗೀತೆ, ಸಂಗೀತ ಹಾಗೂ ರಸಸಂಜೆ ಕಾರ್ಯಕ್ರಮಗಳು ಇಡೀ ರಾತ್ರಿ ಆಗಮಿಸಿದ ಭಕ್ತರಿಗೆ ರಸದೌತಣ ನೀಡಿತು. ಬಂದ ಭಕ್ತರಿಗೆ ಮಧ್ಯ ರಾತ್ರಿಯಿಂದ ಭಾನುವಾರ ಸಂಜೆವರೆಗೂ ಪ್ರಸಾದ ರೂಪದಲ್ಲಿ ತಿಂಡಿ ಸೇರಿದಂತೆ ಅನ್ನಸಂತರ್ಪಣೆ ಬೆಂಗಳೂರಿನ ದಾನಿಯೊಬ್ಬರು ನೆರವೇರಿಸಿದರು.

ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಯಾನಂದ್ ಸೇರಿದಂತೆ ಸಮಿತಿ ಸದಸ್ಯರು ಹಾಗೂ ದೇವಾಲಯದಿಂದ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ವಾಹನಗಳ ದಟ್ಟಣೆ ನಿವಾರಿಸಲು ಅಲ್ಲಲ್ಲಿ ಸುಮಾರು ಹತ್ತಾರು ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ. ನೂಕುನುಗ್ಗಲು ಉಂಟಾಗದಂತೆ, ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆಯಲು ಬ್ಯಾರಿಕೇಟ್, ನದಿಯಲ್ಲಿ ಸ್ನಾನ ಮಾಡಿ ಬಟ್ಟೆ ಬದಲಿಸಿಕೊಳ್ಳಲು ತಾತ್ಕಾಲಿಕ ಶೆಡ್, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಸೇರಿದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿತ್ತು.

ಶ್ರೀನಿಮಿಷಾಂಬ ದೇವಾಲಯದ ಇಒ ಮಹೇಶ್ ಸೇರಿದಂತೆ ತಾಲೂಕು ಆಡಳಿತದ ಸಿಬ್ಬಂದಿ ವರ್ಗ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಸ್ಪರ್ಧಾತ್ಮಕ ಯುಗಕ್ಕೆ ಪರಿಚಯಿಸಬೇಕಿದೆ: ಎಸ್.ಆರ್.ಲೋಕೇಶ್
ಹಾಸನಾಂಬೆ ಜಾತ್ರಾ ಮಹೋತ್ಸವದ ಅಗತ್ಯ ಸಿದ್ಧತೆಗೆ ಸೂಚನೆ