ಜಾಜೂರು ಗ್ರಾಮದಲ್ಲಿ ಮಹಾ ರಥೋತ್ಸವ

KannadaprabhaNewsNetwork | Published : Apr 18, 2025 12:32 AM

ಸಾರಾಂಶ

ರಥೋತ್ಸವದ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಗ್ರಾಮ ದೇವತೆಗಳಾದ ರಂಗನಾಥ ಸ್ವಾಮಿ, ಹೊನ್ನಾಲದಮ್ಮ ದೇವಿ, ಅಮ್ಮಯ್ಯಜ್ಜಿ ದೇವಿ, ಧೂತರಾಯ ಸ್ವಾಮಿ, ವೀರಭದ್ರೇಶ್ವರ ಸ್ವಾಮಿ, ಧೂತರಾಯ ಸ್ವಾಮಿ, ಹೊಸಪಟ್ಟಣ ಗ್ರಾಮದ ಧೂತರಾಯ ಸ್ವಾಮಿ, ಚಿಕ್ಕಮ್ಮ ದೇವಿ, ದೇವತೆಗಳಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು, ಹೊನ್ನಾಲದಮ್ಮ ಹಾಗೂ ಅಮ್ಮಯ್ಯಜ್ಜಿ ದೇವಿಯರು ಹಾಗೂ ಚಿಕ್ಕಮ್ಮ ದೇವಿ, ಹುತ್ತದಮ್ಮ ದೇವಿಗೆ ಮೂಲಸ್ಥಾನದಲ್ಲಿ ಅಭಿಷೇಕ ಮತ್ತು ವಿಶೇಷ ಪೂಜೆ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಗರದ ಹೊರವಲಯದ ಜಾಜೂರು ಗ್ರಾಮದಲ್ಲಿ ಗ್ರಾಮ ದೇವತೆಗಳಾದ ಹೊನ್ನಾಲದಮ್ಮ ದೇವಿ, ಅಮ್ಮಯ್ಯಜ್ಜಿ ದೇವಿ ಹಾಗೂ ಚಿಕ್ಕಮ್ಮ ದೇವಿಯರ ಮಹಾ ರಥೋತ್ಸವವು ವೀರಭದ್ರೇಶ್ವರ ಸ್ವಾಮಿ ದೇವರ ನೇತೃತ್ವದಲ್ಲಿ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ದೇವರ ಮಣೇವು ಉತ್ಸವದೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಏಪ್ರಿಲ್ 13ರಿಂದ 17ರವರೆಗೆ ಸುಮಾರು 5 ದಿನಗಳ ಕಾಲ ಜರುಗಿದ ಈ ಜಾತ್ರಾ ಮಹೋತ್ಸವದಲ್ಲಿ ಒಂದೊಂದು ದಿನವೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು, ಪೂಜಾ ಕೈಂಕರ್ಯ ಜರುಗಿದ್ದು, ಅಪಾರ ಸಂಖ್ಯೆಯ ಭಕ್ತರು ಸಾಕ್ಷಿಯಾಗಿದ್ದು ವಿಶೇಷವಾಗಿತ್ತು. ಬುಧವಾರ ರಾತ್ರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವರುಗಳ ಉತ್ಸವವು ನಡೆಯಿತು. ಬೆಳಿಗ್ಗೆ ಪ್ರಾತಃ ಕಾಲದಲ್ಲಿ ಸಿಡಿ ಉತ್ಸವ ನೆರವೇರಿತು.

ರಥೋತ್ಸವದ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಗ್ರಾಮ ದೇವತೆಗಳಾದ ರಂಗನಾಥ ಸ್ವಾಮಿ, ಹೊನ್ನಾಲದಮ್ಮ ದೇವಿ, ಅಮ್ಮಯ್ಯಜ್ಜಿ ದೇವಿ, ಧೂತರಾಯ ಸ್ವಾಮಿ, ವೀರಭದ್ರೇಶ್ವರ ಸ್ವಾಮಿ, ಧೂತರಾಯ ಸ್ವಾಮಿ, ಹೊಸಪಟ್ಟಣ ಗ್ರಾಮದ ಧೂತರಾಯ ಸ್ವಾಮಿ, ಚಿಕ್ಕಮ್ಮ ದೇವಿ, ದೇವತೆಗಳಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು, ಹೊನ್ನಾಲದಮ್ಮ ಹಾಗೂ ಅಮ್ಮಯ್ಯಜ್ಜಿ ದೇವಿಯರು ಹಾಗೂ ಚಿಕ್ಕಮ್ಮ ದೇವಿ, ಹುತ್ತದಮ್ಮ ದೇವಿಗೆ ಮೂಲಸ್ಥಾನದಲ್ಲಿ ಅಭಿಷೇಕ ಮತ್ತು ವಿಶೇಷ ಪೂಜೆ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.

ರಥೋತ್ಸವದ ಸಂದರ್ಭದಲ್ಲಿ ಕೆಲವು ಭಕ್ತರು ಹಾಗೂ ಗ್ರಾಮಸ್ಥರು, ಹೊನ್ನಾಲದಮ್ಮ ದೇವಿ ಹಾಗೂ ವೀರಭದ್ರೇಶ್ವರ ಸ್ವಾಮಿ ಮತ್ತು ಚಿಕ್ಕಮ್ಮ ದೇವಿಯರ ನಾಮಸ್ಮರಣೆಯ ಜಯಘೋಷದೊಂದಿಗೆ ರಥವನ್ನು ಎಳೆದರು, ಉಳಿದ ಭಕ್ತರು ರಥದ ಕಲಶಕ್ಕೆ ಬಾಳೆಹಣ್ಣು ಮತ್ತು ದವನವನ್ನು ಅರ್ಪಿಸಿ ಸುಡುವ ಬಿಸಿಲಿನಲ್ಲೂ ಭಕ್ತಿಯ ಧನ್ಯತಾಭಾವ ಮೆರೆದರು.

ರಥೋತ್ಸವದ ನಂತರ ವೀರಭದ್ರೇಶ್ವರ ಸ್ವಾಮಿ ಮತ್ತು ಧೂತರಾಯ ಸ್ವಾಮಿ ಹಾಗೂ ಹೊಸಪಟ್ಟಣದ ಧೂತರಾಯ ಸ್ವಾಮಿ ದೇವರುಗಳ ಅದ್ಧೂರಿ ಮಣೇವು ಉತ್ಸವವು ನೆರವೇರಿತು. ಅಪಾರ ಸಂಖ್ಯೆಯ ಭಕ್ತರು ಕಣ್ತುಂಬಿಕೊಂಡರು. ಬಳಿಕ ಉಯ್ಯಾಲೋತ್ಸವ ಮತ್ತು ಗಂಗಾಸ್ನಾನ ಜರುಗಿತು. ಬಳಿಕ ದೇವರು ಗ್ರಾಮದೊಳಗಿನ ದೇವಾಲಯಕ್ಕೆ ಉತ್ಸವದೊಂದಿಗೆ ದಯಪಾಲಿಸಿದ್ದು ವಿಶೇಷವಾಗಿತ್ತು.

ನಾಗತಿಹಳ್ಳಿ, ಕಾಟಿಕೆರೆ, ಬೇರನಾಯಕನಹಳ್ಳಿ, ಗೊಲ್ಲರಹಟ್ಟಿ, ಬಿ. ಜಿ. ಹಟ್ಟಿ ಗ್ರಾಮಗಳು ಹಾಗೂ ಜಾಜೂರು ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Share this article