ಮಹಾದಾಸೋಹ ಪೀಠಾಧಿಪತಿ ಶರಣಬಸಪ್ಪರಿಗೆ ಅನಾರೋಗ್ಯ

KannadaprabhaNewsNetwork |  
Published : Jul 27, 2025, 12:01 AM IST
ಫೋಟೋ- ಫೋಟೋ- ಅಪ್ಪಾಜಿಡಾ. ಶರಣಬಸವಪ್ಪ ಅಪ್ಪಾಜಿ, 8 ನೇ ಮಹಾದಾಸೋಹ ಪೀಠಾಧಿಪತಿಗಳು. ದಾಸೋಹ ಪೀಠ, ಕಲಬುರಗಿ | Kannada Prabha

ಸಾರಾಂಶ

ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿರುವ ಡಾ। ಶರಣಬಸವಪ್ಪ ಅಪ್ಪಾ (90) ಆರೋಗ್ಯದಲ್ಲಿ ಏರುಪೇರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿರುವ ಡಾ। ಶರಣಬಸವಪ್ಪ ಅಪ್ಪಾ (90) ಆರೋಗ್ಯದಲ್ಲಿ ಏರುಪೇರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಅವರ ಶ್ವಾಸಕೋಶದಲ್ಲಿ ಸೋಂಕು ಕಂಡಿದ್ದರಿಂದ ತಕ್ಷಣ ಕುಟುಂಬದವರು ಡಾ। ಅಪ್ಪಾ ಅವರನ್ನು ಕಲಬುರಗಿಯ ಚಿರಾಯು ಆಸ್ಪತ್ರೆಗೆ ದಾಖಲಿಸಿದ್ದು, ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ಮುಂದುವರಿದಿದೆ. ಅಪ್ಪಾಜಿಯವರು ನ್ಯೂಮೇನಿಯಾದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾಹಿತಿ ನೀಡಿದ್ದಾರೆ.

ಡಾ.ಮಂಜುನಾಥ ದೋಶೆಟ್ಟಿ ಸಲಹೆಯಂತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಇನ್ನೊಂದು ದಿನ ಆಸ್ಪತ್ರೆಯಲ್ಲಿರಿಸಿಕೊಂಡು ಮನೆಗೆ ಕಳುಹಿಸುವುದಾಗಿ ವೈದ್ಯರು ಹೇಳಿದ್ದಾರೆ. ಅಪ್ಪಾಜಿ ಶತಾಯುಷಿಗಳಾಗಲಿದ್ದು, ಯಾರೂ ಆತಂಕ ಪಡಬಾರದು ಎಂದು ಬಸವರಾಜ ದೇಶಮುಖ ಮನವಿ ಮಾಡಿದ್ದಾರೆ.

ಮಾತೋಶ್ರೀ ದಾಕ್ಷಾಯಾಣಿ ಅವ್ವಾಜಿ ಸೇರಿದಂತೆ ಶರಣಬಸವ ವಿವಿಯ ಎಲ್ಲಾ ಹಿರಿಯ ಅಧಿಕಾರಿಗಳು, ಕುಟುಂಬದ ಸದಸ್ಯರೆಲ್ಲರೂ ಚಿರಾಯು ಆಸ್ಪತ್ರೆಯಲ್ಲಿಯೇ ಇದ್ದಾರೆ. ಕಲಬುರಗಿ ಮಹಾನಗರ ಪೊಲೀಸ್‌ ಕಮೀಷನರ್‌ ಡಾ। ಶರಣಪ್ಪ ಢಗೆ ಅವರು, ಚಿರಾಯು ಆಸ್ಪತ್ರೆಗೆ ಭೇಟಿ ನೀಡಿ ಶರಣಬಸವಪ್ಪ ಅಪ್ಪಾಜಿಯವರ ಆರೋಗ್ಯ ವಿಚಾರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾನೂನಿನ ಜ್ಞಾನ ಪಡೆಯುವುದು ಅರಣ್ಯವಾಸಿಯ ಮೂಲಭೂತ ಕರ್ತವ್ಯ: ರಂಜಿತಾ
ನೋಂದಾಯಿಸಿದ ಎಲ್ಲ ರೈತರ ಮೆಕ್ಕೆಜೋಳ ಖರೀದಿ: ಸೋಮಣ್ಣ ಉಪನಾಳ