ಹುಬ್ಬಳ್ಳಿ:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ನಿಯೋಗ ಒಯ್ಯುವುದಾಗಿ ಹೇಳಿದ್ದಾರೆ. ಪರಿಸರ ಇಲಾಖೆ ಅನುಮತಿ ಮಾತ್ರ ಬಾಕಿಯಿದೆ. ಆದರೆ, ಯೋಜನೆ ಜಾರಿಗೆ ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ. ಯೋಜನೆಗೆ ಕೇಂದ್ರದಿಂದ ಪರವಾನಗಿ ದೊರೆಯದ ಹೊರತು ಏನೂ ಸಾಧ್ಯವಿಲ್ಲ. ಯೋಜನೆಗಾಗಿ ನಮ್ಮ ಸರ್ಕಾರ ಹಣವನ್ನೂ ಮೀಸಲಿಟ್ಟಿದೆ. ಕೇಂದ್ರದಿಂದ ಹಸಿರು ನಿಶಾನೆ ದೊರೆತ ತಕ್ಷಣವೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದರು.
ಬಂಡೂರಿ ನಾಲಾ ತಿರುವಿಗೆ ಆರ್ಇಸಿ ಹೊಸ ಕ್ಯಾತೆಬಂಡೂರಿ ನಾಲಾಕ್ಕೆ ಮಹದಾಯಿ ನೀರು ತಿರುಗಿಸಿಕೊಳ್ಳುವ ರಾಜ್ಯದ ಪ್ರಸ್ತಾವನೆಗೆ ಕೇಂದ್ರ ಪರಿಸರ ಖಾತೆಯ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಆರ್ಇಸಿ) ಹೊಸ ಕ್ಯಾತೆ ತೆಗೆದಿದೆ. ಈ ಬಗ್ಗೆ ರಾಜ್ಯದ ಸಂಸದರು ಧ್ವನಿ ಎತ್ತದಿದ್ದರೆ ರೈತ ಹೋರಾಟಗಾರರ ಸಭೆ ಕರೆದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಎಚ್ಚರಿಸಿದ್ದಾರೆ.
ಈ ವರೆಗೂ ಇದ್ದ ಅನೇಕ ಅಂತಾರಾಜ್ಯ ವಿವಾದಗಳು ಬಗೆಹರಿದಿವೆ. ಕಳಸಾ ಬಂಡೂರಿ ಯೋಜನೆಯ ವಿಚಾರವಾಗಿ ನ್ಯಾಯಾಧಿಕರಣವೂ ಕ್ಲಿಯರೆನ್ಸ್ ನೀಡಿದೆ. ಯೋಜನೆಯ ಅನುಷ್ಠಾನಕ್ಕೆ ಡಿಪಿಆರ್ಗೆ ಅನುಮೋದನೆ ನೀಡಲಾಗಿದೆ. ಆದರೆ, ಇಲ್ಲಸಲ್ಲದ ಕಾನೂನು ತಂದು ಯೋಜನೆಗೆ ತಡೆಹಿಡಿಯಲಾಗುತ್ತಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ರಾಜ್ಯದ ಎಲ್ಲ ಸಂಸದರೊದಿಗೆ ಪ್ರಧಾನಿ ಭೇಟಿ ಮಾಡಬೇಕು ಎಂದು ತೀರ್ಮಾನ ಕೈಗೊಂಡಿದ್ದೆವು. ಆದರೆ, ಇದಕ್ಕೆ ಸಂಸದರು ಆಸಕ್ತಿ ತೋರಲಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಭೇಟಿಯಾಗಿ ನಿಯೋಗ ಒಯ್ಯುವ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.