ಕನ್ನಡಪ್ರಭ ವಾರ್ತೆ ಹನೂರು
ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೊಟ್ಟ ಮೊದಲ ಬಾರಿಗೆ ಆಯೋಜಿಸಿದ್ದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಸರ್ವರಿಗೂ ಹೃದಯಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್ ತಿಳಿಸಿದರು.ಹನೂರು ಪಟ್ಟಣದ ಲೋಕೋಪಯೋಗಿ ಅತಿಥಿಗೃಹದಲ್ಲಿ ಕರೆಯಲಾಗಿದ್ದ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಹನೂರು ಕ್ಷೇತ್ರದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಕಾರ್ಯಕ್ರಮಕ್ಕೆ ಆಗಮಿಸಿದ್ದ 32 ಜಿಲ್ಲೆಯ ಪದಾಧಿಕಾರಿಗಳು ಹಾಗೂ ಪ್ರತಿಭಾ ಪುರಸ್ಕಾರ ಪಡೆದ ಪೋಷಕರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಕಾರ್ಯಕ್ರಮವನ್ನು ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ದೇವರಾಜು ಕಪ್ಪಸೋಗೆ ಮಾರ್ಗದರ್ಶನದಲ್ಲಿ ನಮ್ಮ ಸಂಘದ ಸರ್ವ ಸದಸ್ಯರು ಚಾಚು ತಪ್ಪದೆ ಎಲ್ಲ ಜವಾಬ್ದಾರಿಯನ್ನು ನಿರ್ವಹಣೆ ಮಾಡುವುದರ ಮೂಲಕ ರಾಜ್ಯದಲ್ಲಿಯೇ ಮಾದರಿ ತಾಲೂಕಾಗಿ ಜನ ಮನ್ನಣೆ ಪಡೆದುಕೊಂಡಿದೆ ಎಂದರು.ಇದು ನನ್ನ ಜೀವನದಲ್ಲಿ ಮರೆಯಲಾಗದ ಕ್ಷಣ, ನನ್ನ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ರಾಜ್ಯಾಧ್ಯಕ್ಷರು ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯ ಸಂಘವು ನಮ್ಮ ಜಿಲ್ಲೆಗೆ ನೀಡುವ ಯಾವುದೇ ಕಾರ್ಯಕ್ರಮ ಹಾಗೂ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುವುದು ಎಂದು ತಿಳಿಸಿದರು.
ಗೌರವಾಧ್ಯಕ್ಷ ದೇವರಾಜ್ ನಾಯ್ಡು ಮಾತನಾಡಿ, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮಲೆಮಹದೇಶ್ವರ ಬೆಟ್ಟದ ಸನ್ನಿಧಾನದಲ್ಲಿ ನಡೆದಿರುವುದರಿಂದ ಕಾರ್ಯಕ್ರಮವು ಉತ್ತಮವಾಗಿ ಮೂಡಿ ಬಂತು. ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಪದಾಧಿಕಾರಿಗಳು ಸದಸ್ಯರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದರು.ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್, ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ್, ಸ್ಥಳೀಯ ಶಾಸಕರಾದ ಎಂ.ಆರ್.ಮಂಜುನಾಥ್ ಅವರ ಸಂಪೂರ್ಣ ಸಹಕಾರದೊಂದಿಗೆ ಪ್ರತಿ ಹಂತದಲ್ಲಿಯೂ ಸಹಕರಿಸಿದರು ಜೊತೆಗೆ ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಜಿಲ್ಲಾಡಳಿತ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆಟಿ ಕವಿತಾ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ರಾಜ್ಯದ ಎಲ್ಲಾ ಪತ್ರಕರ್ತರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದರು.
ನಮ್ಮ ಮಾದಪ್ಪನ ಕ್ಷೇತ್ರಕ್ಕೆ 32 ಜಿಲ್ಲೆಗಳಿಂದ ಆಗಮಿಸಿದ ಪತ್ರಕರ್ತರು ಮಹದೇಶ್ವರ ಇತಿಹಾಸವನ್ನು ತಿಳಿದುಕೊಂಡಿದ್ದಾರೆ. ಮಹದೇಶ್ವರರ ಇತಿಹಾಸ ರಾಜ್ಯದೆಲ್ಲಡೆ ತಲುಪುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.ಪ್ರಧಾನ ಕಾರ್ಯದರ್ಶಿ ಬಸವರಾಜು ಮಾತನಾಡಿ, ರಾಜ್ಯದ ಗಡಿ ತಾಲೂಕಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯಶಸ್ವಿಯಾಗಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಸಮ್ಮೇಳನ ಮಾಡುವ ಅವಕಾಶವು ಸಹ ಬರಲಿದೆ ಎಂಬ ಆಶಾಭಾವನೆ ಮೂಡಿದೆ ಎಂದರು. ರಾಜ್ಯ ಸಂಘ ನಮ್ಮ ತಾಲೂಕು ಸಂಘಕ್ಕೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೇವೆ. ಕಾರ್ಯಕ್ರಮದ ಆಯೋಜನೆಗೆ ನಮ್ಮ ಪದಾಧಿಕಾರಿಗಳು, ಸದಸ್ಯರು ಹಗಲಿರುಳು ಶ್ರಮಿಸಿದ್ದಾರೆ. ಪ್ರತಿಯೊಬ್ಬರು ಹಬ್ಬ ಆಚರಣೆ ಮಾಡಿದಂತೆ ವಿಜೃಂಭಣೆಯಿಂದ ಕಾರ್ಯಕ್ರಮ ಮಾಡಿರುವುದು ವಿಶೇಷ ಎಂದರು.ಜಿಲ್ಲಾ ನಿರ್ದೇಶಕ ಸುರೇಶ್ ಮಾತನಾಡಿ, ಮಲೆಮಾದೇಶ್ವರ ಬೆಟ್ಟದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ. ಕಾರ್ಯಕ್ರಮದಲ್ಲಿ ಸಣ್ಣಪುಟ್ಟ ತಪ್ಪುಗಳಾಗುವುದು ಸಹಜ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಂಡು ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ರಾಜ್ಯಕ್ಕೆ ಮಾದರಿ ತಾಲೂಕಾಗಿ ಪರಿವರ್ತಿಸಲು ತಮ್ಮೆಲ್ಲರ ಸಹಕಾರ ಮುಖ್ಯ ಎಂದರು. ಸಭೆಯಲ್ಲಿ ಸಂಘದ ಸರ್ವ ಸದಸ್ಯರು ಸಹ ತಮ್ಮ ಅಭಿಪ್ರಾಯಗಳನ್ನು ಕಾರ್ಯಕ್ರಮ ಯಶಸ್ವಿಯಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕ ಸುರೇಶ್, ಸಹ ಕಾರ್ಯದರ್ಶಿ ಗೋವಿಂದ ಕೆ, ಖಜಾಂಚಿ ಮಹದೇವಸ್ವಾಮಿ, ನಿರ್ದೇಶಕರುಗಳಾದ ಮಧು, ಸೋಮಶೇಖರ್, ಸದಸ್ಯರಾದ ಮಣಗಳ್ಳಿ ಮಹಾದೇವ, ಅಭಿಲಾಶ್, ರವಿ, ನಾಗೇಂದ್ರ ಪ್ರಸಾದ್, ವಿಜಯ್ , ಮಹದೇವಸ್ವಾಮಿ.ಜಿ, ಶಿವಕುಮಾರ್, ಕರಿಯನಪುರ ಲಿಂಗರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.