ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಬ್ಯಾಂಕ್ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕರಾವಳಿಯ ಪ್ರತಿಷ್ಠಿತ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ 2024-25ನೇ ಸಾಲಿನ ಸರ್ವತೋಮುಖ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸತತ 9ನೇ ಬಾರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಬ್ಯಾಂಕ್ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.ಯಶ್ಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ಪ್ರಸಕ್ತ ಸಾಲಿನಲ್ಲಿ 1,000 ಕೋಟಿ ರು.ಗೂ ಮಿಕ್ಕಿ ಒಟ್ಟು ವ್ಯವಹಾರ ನಡೆಸಿದ್ದು, ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.