ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಅವರು ಬಾಗಲಕೋಟೆ ನವನಗರದ ಸ.ಪ್ರ.ದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಲಿಂಗೈಕ್ಯ ಡಾ.ಮಹಾಂತ ಶಿವಯೋಗಿಗಳವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಪೂಜ್ಯ ಡಾ.ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ವ್ಯಕ್ತಿ, ಕುಟುಂಬ, ಸಮಾಜ, ಗ್ರಾಮಗಳ ನಿರ್ಮಾಣ ಮಾಡುವ ಜೊತೆಗೆ ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಾಮಾಜಿಕ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ವ್ಯಸನಗಳ ಮನಪರಿವರ್ತನೆ ಮಾಡುವುದರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನರು ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ ಮಾಡಿದ್ದರೆ ಎಂದರು.