ಗೃಹಶೋಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಪುಷ್ಪನಮನ

KannadaprabhaNewsNetwork |  
Published : Dec 28, 2024, 12:47 AM IST
20 | Kannada Prabha

ಸಾರಾಂಶ

ಅಮೇರಿಕ, ರಷ್ಯಾ, ಇಂಗ್ಲೆಂಡ್ ಮುಂತಾದ ವಿದೇಶಗಳು ಭಾರತ ಕಡೆ ತಿರುಗಿ ನೋಡುವಂತೆ ಜಾಗತಿಕ ಮನ್ನಣೆ,

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರಿನ‌ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಗೃಹಶೋಭೆ ವಸ್ತುಪ್ರದರ್ಶನ‌ದಲ್ಲಿ ಕಲಾವಿದರಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ಗೃಹಶೋಭೆ ವ್ಯವಸ್ಥಾಪಕ ಕೃಷ್ಣ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಅಮೇರಿಕ, ರಷ್ಯಾ, ಇಂಗ್ಲೆಂಡ್ ಮುಂತಾದ ವಿದೇಶಗಳು ಭಾರತ ಕಡೆ ತಿರುಗಿ ನೋಡುವಂತೆ ಜಾಗತಿಕ ಮನ್ನಣೆ, ಆಡಳಿತ ಅಭಿವೃದ್ಧಿ ಕೆಲಸ ಮಾಡಿ ದೇಶದೆಲ್ಲೆಡೆ ರಾಜಕೀಯ ವ್ಯವಸ್ಥೆಯಲ್ಲಿ ಪದವೀಧರ ಪ್ರಜ್ಞಾವಂತ ಸಮಾಜ ಕಟ್ಟಿದವರು ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಎಂದರು. ಆಧಾರ್ ಕಾರ್ಡ್ ಜಾರಿಗೆ, ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಶಾ ಕಾರ್ಯಕರ್ತರ ಯೋಜನೆ, ನರೇಗಾ, ಮಾಹಿತಿ ಹಕ್ಕು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದು ದೇಶದ ಭವಿಷ್ಯಕ್ಕೆ ಆರ್ಥಿಕ ವ್ಯವಸ್ಥೆಯ ಭದ್ರಬುನಾದಿ ಹಾಕಿದರು. ನಮ್ಮ ಮಾತಿಗಿಂತ ಕಲಸವೇ ಮಾತಾಗಬೇಕು ಎನ್ನುವುದಕ್ಕೆ ನಿದರ್ಶನವಾಗಿ ಮೌನಿಯಲ್ಲ ದೇಶದ ಮಹಾನ್ ಜ್ಞಾನಿಯಾದವರು ಮನಮೋಹನ್ ಸಿಂಗ್ ಎಂದು ಅವರು ಸ್ಮರಿಸಿದರು. ನಿರೂಪಕ ಅಜಯ್ ಶಾಸ್ತ್ರಿ, ಗಾಯಕರಾದ ಸೇತುರಾಂ, ಜಗದೀಶ್, ಸುಬ್ರಹ್ಮಣ್ಯ, ಮೀನಾಕ್ಷಿ ಚಟ್ನಿ, ವಿಶ್ವನಾಥ್, ಮೋಹನ್ ಕುಮಾರ್, ಶ್ರೀನಿವಾಸ್, ಸುಮಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ