ಕನ್ನಡಪ್ರಭ ವಾರ್ತೆ ಮಧುಗಿರಿ
ಮಧುಗಿರಿ ಪಟ್ಟಣದ ಐತಿಹಾಸಿಕ ಶ್ರೀ ಪ್ರಸನ್ನ ಪಾರ್ವತಿ ಸಮೇತ ಶ್ರೀಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ 6 ರಿಂದ ರುದ್ರಾಭಿಷೇಕ, ವಿಶೇಷ ಪೂಜೆಯು ನಾಗರಾಜಶಾಸ್ತ್ರಿ ಮತ್ತು ತಂಡದವರಿಂದ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ದೇಗುಲಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು.
ಭಕ್ತಾದಿಗಳು ಇಡೀ ದಿನ ಶ್ರದ್ಧೆ- ಭಕ್ತಿಯಿಂದ ಶಿವನ ಆರಾಧನೆ ಮಾಡುವ ಮೂಲಕ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.ಬೆಳಗ್ಗೆ 5 ರಿಂದ 7ರವರೆಗೆ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಹೇಮಾವತಿ ವಲಯ ಮಧುಗಿರಿ ಶಾಖೆಯಿಂದ ಏಕಾತ್ಮತಾ ಸ್ತೋತ್ರ, ಅಗ್ನಿಹೋತ್ರ, 11ನೇ ಸುತ್ತಿನ ಶಿವ ನಮಸ್ಕಾರ ನಡೆದವು. ವಿವಿಧ ಮಹಿಳಾ ಸಂಘಟನೆಗಳಿಂದ ಶಿವನ ಭಕ್ತಿಗೀತೆಗಳನ್ನು ಹಾಡುವ ಮೂಲಕ ಭಕ್ತರನ್ನು ಪರವಶರನ್ನಾಗಿಸಿದವು.
ಯಾಮದ ಪೂಜೆಯಲ್ಲಿ ಎಸಿ ಗೋಟೂರು ಶಿವಪ್ಪ, ತಹಸೀಲ್ದಾರ್ ಶಿರಿನ್ ತಾಜ್, ಸಿಪಿಐ ಹನುಮಂತರಾಯಪ್ಪ, ಪುರಸಭೆ ಉಪಾಧ್ಯಕ್ಷೆ ಸುಜಾತ ಶಂಕರನಾರಾಯಣ್ ,ಧಾರ್ಮಿಕ ಮುಖಂಡ ಡಾ.ಎಂ.ಜಿ.ಶ್ರೀನಿವಾಸಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ವಿ.ಗೋವಿಂದರಾಜು, ಶಂಕರ ಸೇವಾ ಸಮಿತಿ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ್, ಪ್ರಧಾನ ಅರ್ಚಕ ನಟರಾಜ ದೀಕ್ಷಿತ್, ಭಕ್ತ ಮಂಡಳಿಯ ಕೆ.ವಿ.ಮಂಜುನಾಥಗುಪ್ತ, ಎಸ್ವಿಎಲ್ ಶ್ರೀಧರ್, ಆರ್.ಧನ್ಪಾಲ್, ಅಡಿಟರ್ ಲಕ್ಷ್ಮೀಪ್ರಸಾದ್, ದೋಲಿಬಾಬು, ಪತ್ರಕರ್ತ ಜಿ.ನಾರಾಯಣರಾಜು, ಎಸ್ಬಿಐ ಗೋಪಾಲ್, ಗಣೇಶ್, ಹೋಟಲ್ ಬಸವರಾಜು, ಪುರಸಭೆ ಮಾಜಿ ಸದಸ್ಯ ರಘುಯಾದವ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.